
ಲಂಡನ್: ಇಲ್ಲಿನ ಮಸೀದಿಯೊಂದರ ಹೊರಗಡೆ ನಿಂತಿದ್ದ ಜನರ ಮೇಲೆ ವ್ಯಾನ್ವೊಂದು ಹರಿದು ಓರ್ವ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಬ್ರಿಟನ್ ಪ್ರಧಾನಿ ತೆರೆಸಾ ಮೇ ಇಂದೊಂದು ಶಂಕಿತ ಭಯೋತ್ಪಾದಕ ದಾಳಿ ಎಂದು ಹೇಳಿದ್ದಾರೆ.
ಭಾನುವಾರ ಮಧ್ಯರಾತ್ರಿಯ ವೇಳೆಯಲ್ಲಿ ಈ ಘಟನೆ ನಡೆದಿದೆ. ವೆಲ್ಫೇರ್ ಹೌಸ್ನಲ್ಲಿರುವ ಮಸೀದಿಯಲ್ಲಿ ರಂಜಾನ್ ಪ್ರಾರ್ಥನೆಗೆಂದು ಆಗಮಿಸಿದ್ದವರ ಮೇಲೆ ಚಾಲಕ ವ್ಯಾನ್ ನುಗ್ಗಿಸಿದ್ದಾನೆ.
ಈ ವೇಳೆ ಸಿಟ್ಟಿಗೆದ್ದ ಜನರು ಚಾಲಕನನನ್ನು ಹಿಡಿದು ಹಲ್ಲೆ ನಡೆಸಲು ಯತ್ನಿಸಿದ್ದು, ಮಸೀದಿಯ ಮೌಲ್ವಿಯೊಬ್ಬರು ದಾಳಿಕೋರ ಚಾಲಕನಿಗೆ ರಕ್ಷಣೆ ನೀಡಿ ಆತನ ಪ್ರಾಣ ಉಳಿಸಿದ್ದಾರೆ. ಬಳಿಕ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.