
ಶ್ರೀನಗರ(ಅ. 03): ಬಿಎಸ್'ಎಫ್ ಕ್ಯಾಂಪ್ ಮೇಲೆ ನಡೆದ ಉಗ್ರರು ದಾಳಿ ಎಸಗಿದ್ದಾರೆ. ಈ ಘಟನೆಯಲ್ಲಿ ಇಬ್ಬರು ಉಗ್ರರು ಸೇರಿ ಮೂವರು ಸಾವನ್ನಪ್ಪಿದ್ದಾರೆ. ಮೂರಕ್ಕೂ ಹೆಚ್ಚು ಬಿಎಸ್'ಎಫ್ ಜವಾನರಿಗೆ ಗಾಯಗಳಾಗಿವೆ. ಬಿಎಸ್'ಎಫ್'ನ ಎಎಸ್'ಎಐ ಅವರು ಬಲಿಯಾಗಿದ್ದಾರೆ.
ಇಲ್ಲಿಯ ಅಂತಾರಾಷ್ಟ್ರೀಯ ಏರ್'ಪೋರ್ಟ್'ಗೆ ಸಮೀಪದಲ್ಲೇ ಇದ್ದ 182ನೇ ಬಿಎಸ್'ಎಫ್ ಬೆಟಾಲಿಯನ್'ನ ಆಡಳಿತ ಸಂಕೀರ್ಣದ ಮೇಲೆ ಈ ದಾಳಿ ನಡೆದಿದೆ. ಪೊಲೀಸರ ಪ್ರಕಾರ ಭಯೋತ್ಪಾದಕರು ಆತ್ಮಹತ್ಯಾ ದಾಳಿ ಎಸಗಿರುವ ಶಂಕೆ ಇದೆ. ಆದರೆ, ಎಷ್ಟು ಮಂದಿ ಉಗ್ರರು ದಾಳಿ ಎಸಗಿದ್ದಾರೆಂಬುದು ಇನ್ನೂ ಖಚಿತವಾಗಿ ತಿಳಿದಿಲ್ಲ. ಜೈಷೆ ಮೊಹಮ್ಮದ್ ಉಗ್ರ ಸಂಘಟನೆಯು ಈ ದಾಳಿಯ ಹೊಣೆ ಹೊತ್ತುಕೊಂಡಿದೆ.
ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿದ್ದು, ಇನ್ನುಳಿದ ಉಗ್ರರ ಬೇಟೆಗಾಗಿ ಭದ್ರತಾ ಪಡೆಗಳು ನಾಕಾಬಂದಿ ಹಾಕಿವೆ. ನಾಥಿಪೋರಾ ಎಂಬಲ್ಲಿ ಪೊಲೀಸರು 5 ಕಿಲೋ ಎಲ್'ಇಡಿ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಿಎಸ್'ಎಫ್ ಕ್ಯಾಂಪ್'ನ ಕಟ್ಟಡವೊಂದರಲ್ಲಿ ಇಬ್ಬರು ಉಗ್ರರು ಅಡಗಿಕೊಂಡಿದ್ದಾರೆಂಬ ಮಾಹಿತಿಯನ್ನು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಗೃಹ ಸಚಿವ ರಾಜನಾಥ್ ಸಿಂಗ್ ಅವರು ಉನ್ನತ ಮಟ್ಟದ ಸಭೆ ಕರೆದಿದ್ದು ಮುಂದಿನ ಕಾರ್ಯಾಚರಣೆಯ ಕುರಿತು ಚರ್ಚೆ ನಡೆಸಿದ್ದಾರೆ. ಇದೇ ವೇಳೆ, ಶ್ರೀನಗರ ಏರ್'ಪೋರ್ಟ್'ನಲ್ಲಿ ವಿಮಾನ ಹಾರಾಟಗಳ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ನಗರದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಎಲ್ಲೆಡೆ ಭದ್ರತೆ ಬಿಗಿಗೊಳಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.