ಮೋದಿಯಿಂದಾಗಿ ಉಗ್ರ ದಾಳಿ ಎಂದ ರಾಹುಲ್ ಗಾಂಧಿ ನೀಡಿದ ಸಮೀಕರಣ ಏನು ಗೊತ್ತಾ?

Published : Jul 13, 2017, 09:47 AM ISTUpdated : Apr 11, 2018, 12:41 PM IST
ಮೋದಿಯಿಂದಾಗಿ ಉಗ್ರ ದಾಳಿ ಎಂದ ರಾಹುಲ್ ಗಾಂಧಿ ನೀಡಿದ ಸಮೀಕರಣ ಏನು ಗೊತ್ತಾ?

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ, ಅಲ್ಪಾವಧಿ ರಾಜಕೀಯ ಲಾಭದ ದುರಾಸೆಗಾಗಿ ರೂಪಿಸುತ್ತಿರುವ ನೀತಿಗಳು, ಕಾಶ್ಮೀರದಲ್ಲಿ ಭಯೋತ್ಪಾದಕರಿಗೆ ಅವಕಾಶ ಸೃಷ್ಟಿಸುತ್ತಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಗಂಭೀರ ಆಪಾದನೆ ಮಾಡಿದ್ದಾರೆ.

ಶ್ರೀನಗರ(ಜು.13): ಪ್ರಧಾನಿ ನರೇಂದ್ರ ಮೋದಿ, ಅಲ್ಪಾವಧಿ ರಾಜಕೀಯ ಲಾಭದ ದುರಾಸೆಗಾಗಿ ರೂಪಿಸುತ್ತಿರುವ ನೀತಿಗಳು, ಕಾಶ್ಮೀರದಲ್ಲಿ ಭಯೋತ್ಪಾದಕರಿಗೆ ಅವಕಾಶ ಸೃಷ್ಟಿಸುತ್ತಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಗಂಭೀರ ಆಪಾದನೆ ಮಾಡಿದ್ದಾರೆ.

ಅಮರನಾಥ ಯಾತ್ರಾರ್ಥಿಗಳ ಮೇಲಿನ ಉಗ್ರರ ದಾಳಿಯ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಈ ಆಪಾದನೆ ಮಾಡಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ, ಪಿಡಿಪಿಯೊಂದಿಗೆ ಮೈತ್ರಿ ಸರ್ಕಾರ ನಡೆಸುತ್ತಿರುವುದನ್ನೂ ರಾಹುಲ್ ಟೀಕಿಸಿದ್ದಾರೆ. ಬಿಜೆಪಿ-ಪಿಡಿಪಿ ಮೈತ್ರಿಗೆ ಭಾರತ ದೊಡ್ಡ ಬೆಲೆ ತೆರಬೇಕಾಗಿದೆ. ಪ್ರಧಾನಿಯವರ ವೈಯಕ್ತಿಕ ಲಾಭಕ್ಕಾಗಿ, ಅಮಾಯಕ ಭಾರತೀಯರ ರಕ್ತ ಹರಿದಿದೆ, ಅಲ್ಲದೆ ಭಾರತಕ್ಕೆ ತಂತ್ರಗಾರಿಕೆಯ ನಷ್ಟವಾಗಿದೆ ಎಂದು ರಾಹುಲ್ ಹೇಳಿದ್ದಾರೆ. ಭಾರತ ಯಾವತ್ತೂ ಭಯೋತ್ಪಾದಕರಿಗೆ ಬೆದರುವುದಿಲ್ಲ ಎಂದೂ ಅವರು ತಿಳಿಸಿದ್ದಾರೆ.

ಇದೇ ವೇಳೆ ‘ಮೋದಿ ವೈಯಕ್ತಿಕ ಲಾಭ= ಭಾರತದ ವ್ಯೆಹಾತ್ಮಕ ನಷ್ಟ + ಅಮಾಯಕರ ಭಾರತೀಯರ ಬಲಿದಾನ’ ಎಂಬ ಸಮೀಕರಣದ ಮೂಲಕ ಮೋದಿ ಅವರನ್ನು ರಾಹುಲ್ ವ್ಯಂಗ್ಯವಾಡಿದ್ದಾರೆ.

ಹುಡುಕಾಟ:

ಈ ನಡುವೆ 7 ಅಮರನಾಥ ಯಾತ್ರಿಕರ ಹತ್ಯೆ ಪ್ರಕರಣದ ಪ್ರಮುಖ ರೂವಾರಿ, ಲಷ್ಕರ್ ಎ ತೊಯ್ಬಾ ಉಗ್ರ ಅಬು ಇಸ್ಮಾಯಿಲ್‌ನನ್ನು ವಶಕ್ಕೆ ಪಡೆಯಲು ಭದ್ರತಾ ಪಡೆಗಳು ತೀವ್ರ ಕಾರ್ಯಾಚರಣೆ ಕೈಗೊಂಡಿವೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಾಮನೂರು ಶಿವಶಂಕರಪ್ಪ ನಿಧನ; ತಿರುಪತಿ ಪ್ರಯಾಣ ರದ್ದು, ಸಚಿವ ಎಸ್‌ಎಸ್‌ ಮಲ್ಲಿಕಾರ್ಜುನ್ ಕುಟುಂಬ ತಕ್ಷಣ ವಾಪಸ್!
ಹೊಸಕೋಟೆಗೆ ಕಾಂಗ್ರೆಸ್‌ ಅವಧಿಯಲ್ಲೇ ಮೆಟ್ರೋ, ಶೀಘ್ರದಲ್ಲೇ ಸಿಗಲಿದೆಯೇ ಸಿಹಿ ಸುದ್ದಿ, ಯಾವ ಮಾರ್ಗ ವಿಸ್ತರಣೆ?