
ನವದೆಹಲಿ: ಜಮ್ಮು-ಕಾಶ್ಮೀರದ ಉರಿ ಸೇನಾನೆಲೆ ಮೇಲೆ ನಡೆದ ದಾಳಿಯ ನಂತರ ಭಾರತ ನಡೆಸಿದ ಸರ್ಜಿಕಲ್ ದಾಳಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ)ದಲ್ಲಿನ ಪಾಕಿಸ್ತಾನಿ ಉಗ್ರರ ನೆಲೆಗಳು ಧ್ವಂಸಗೊಂಡಿದ್ದವು. ಆದರೆ ಈ ನೆಲೆಗಳು ಈಗ ಮತ್ತೆ ಸಕ್ರಿಯವಾಗತೊಡಗಿದ್ದು, ಭಾರತದೊಳಗೆ ಉಗ್ರರನ್ನು ಕಳಿಸಲು ಸಿದ್ಧತೆ ನಡೆಸುತ್ತಿವೆ ಎಂಬ ಆತಂಕಕಾರಿ ಮಾಹಿತಿ ಬೆಳಕಿಗೆ ಬಂದಿದೆ.
ಬಾರಾಮುಲ್ಲಾದಲ್ಲಿರುವ 19ನೇ ಸೇನಾ ವಿಭಾಗದ ಮುಖ್ಯಸ್ಥ ಮೇ|ಜ| ಆರ್.ಪಿ. ಕಲಿತಾ ಎನ್'ಡಿಟೀವಿ ಜೊತೆ ಮಾತನಾಡಿ ಈ ವಿಷಯ ತಿಳಿಸಿದ್ದಾರೆ. ‘ಈಗ ಚಳಿ ಕಮ್ಮಿಯಾಗತೊಡಗಿದ್ದು, ಹಿಮ ಕರಗುತ್ತಿದೆ. ಇದು ಉಗ್ರರನ್ನು ಕಾಶ್ಮೀರದೊಳಗೆ ಕಳಿಸಲು ಪ್ರಶಸ್ತವಾದ ಸಮಯ ಎಂದು ಗಡಿಯಾಚೆಯ ಉಗ್ರ ಸಂಘಟನೆಗಳು ಭಾವಿಸುತ್ತವೆ. ನಾವು ಸರ್ಜಿಕಲ್ ದಾಳಿಯಲ್ಲಿ ನಾಶ ಮಾಡಿದ 10 ಉಗ್ರರ ಕ್ಯಾಂಪ್ಗಳು ಈಗ ಮತ್ತೆ ಕಾರಾರಯಚರಣೆ ಆರಂಭಿಸಿವೆ ಎಂದು ತಿಳಿದುಬಂದಿದೆ' ಎಂದಿದ್ದಾರೆ.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.