
ಮುಂಬೈ (ಏ.25): 2008ರಲ್ಲಿ ಸಂಭವಿಸಿದ ಮಾಲೆಗಾಂವ್ ಭಯೋತ್ಪಾದನಾ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಭಯೋತ್ಪಾದಕಿ ಸಾಧ್ವಿ ಪ್ರಜ್ಞಾಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಸಾಧ್ವಿ ಪ್ರಜ್ಞಾಗೆ 5 ಲಕ್ಷ ರೂಪಾಯಿ ಬಾಂಡ್ ಶ್ಯೂರಿಟಿ ಮೇಲೆ ಹೈಕೋರ್ಟ್ ಜಾಮೀನು ನೀಡಿದೆ. ಮಾಲೆಗಾಂವ್ ಭಯೋತ್ಪಾದನಾ ದಾಳಿ ಪ್ರಕರಣದಲ್ಲಿ ಸಾಧ್ವಿ ಪ್ರಮುಖ ಆರೋಪಿ ಎಂದು ಎನ್’ಐಎ ಆರೋಪಪಟ್ಟಿ ಸಲ್ಲಿಸಿತ್ತು.
ಆದರೆ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಕರ್ನಲ್ ಪುರೋಹಿತ್ ಕಳೆದ ವರ್ಷ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದನು. ಮುಂಬೈ ಹೈಕೋರ್ಟ್ ಅದನ್ನು ತಿರಸ್ಕರಿಸಿದೆ.
2008ರಲ್ಲಿ ಸಂಭವಿಸಿದ್ದ ಮಾಲೆಗಾಂವ್ ಸ್ಫೋಟದಲ್ಲಿ 7 ಮಂದಿ ಸಾವನ್ನಪ್ಪಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.