
ಇಸ್ಲಾಮಾಬಾದ್(ಆ.16): ಸಾಮಾನ್ಯವಾಗಿ ಕಾರ್ಪೊರೇಟ್ ವಲಯದಲ್ಲಿ ತಮ್ಮ ಸಿಬ್ಬಂದಿಯ ‘ಸಾಧನೆಯ ವರದಿ’ ಸಿದ್ಧಪಡಿಸಲಾಗುತ್ತದೆ. ಆದರೆ, ಇದೀಗ ಭಾರತ-ಪಾಕಿಸ್ತಾನ ಗಡಿ ರೇಖೆ ಬಳಿ ಕಾರ್ಯ ನಿರ್ವಹಿಸುವ ಉಗ್ರ ಸಂಘಟನೆಗಳೂ ತಮ್ಮ ಕಾರ್ಯಕರ್ತರ ‘ಸಾಧನೆಯ ವರದಿ’ ಸಿದ್ಧಪಡಿಸುತ್ತಿದ್ದು, ಸರಿಯಾಗಿ ಕಾರ್ಯ ನಿರ್ವಹಿಸದವರನ್ನು ನಿರ್ದಾಕ್ಷಿಣ್ಯವಾಗಿ ಬದಲಾಯಿಸುತ್ತಿರುವುದು ಬೆಳಕಿಗೆ ಬಂದಿದೆ.
ಈ ಬಗ್ಗೆ ಗುಪ್ತಚರ ವರದಿಯಲ್ಲಿ ಮಾಹಿತಿ ಲಭ್ಯವಾಗಿದೆ. ಕಳೆದ ಒಂದೂವರೆ ವರ್ಷದಿಂದ ಜಮ್ಮು-ಕಾಶ್ಮೀರ ಮತ್ತು ಗಡಿರೇಖೆಗಳಲ್ಲಿ ಉಗ್ರರನ್ನು ಭಾರತೀಯ ಸೇನೆ ಸದೆಬಡಿಯುತ್ತಿರುವ ಹಿನ್ನೆಲೆಯಲ್ಲಿ, ಉತ್ತಮ ಸಾಧನೆ ತೋರದ ಉಗ್ರ ಕಮಾಂಡರ್ ಗಳನ್ನು ಬದಲಾಯಿಸಲಾಗುತ್ತಿದೆ.
ಗಡಿರೇಖೆಯುದ್ದಕ್ಕೂ ಇರುವ ಲಷ್ಕರೆ ತೊಯ್ಬಾ ಮತ್ತು ಜೈಷೆ ಮೊಹಮ್ಮದ್ ಉಗ್ರ ಸಂಘಟನೆಗಳ 30 ಕಾರ್ಯಾಚರಣಾ ನೆಲೆಗಳಲ್ಲಿ ಬಹುತೇಕ ನೆಲೆಗಳ ಮುಖ್ಯಸ್ಥರನ್ನು ಮೂರು ತಿಂಗಳಿಗೊಮ್ಮೆ ಬದಲಾಯಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ