ನೆರೆ ಪರಿಹಾರಕ್ಕೆ ಸರ್ಕಾರದಲ್ಲಿ ಹಣ ಇಲ್ಲ: ಕೊನೆಗೂ ಸತ್ಯ ಒಪ್ಪಿಕೊಂಡ ಯಡಿಯೂರಪ್ಪ

Published : Oct 03, 2019, 10:03 PM ISTUpdated : Oct 04, 2019, 12:02 PM IST
ನೆರೆ ಪರಿಹಾರಕ್ಕೆ ಸರ್ಕಾರದಲ್ಲಿ ಹಣ ಇಲ್ಲ: ಕೊನೆಗೂ ಸತ್ಯ ಒಪ್ಪಿಕೊಂಡ ಯಡಿಯೂರಪ್ಪ

ಸಾರಾಂಶ

ರಾಜ್ಯ ಸರ್ಕಾರ ನೆರೆ ನಿರಾಶ್ರಿತರಿಗೆ ಅತ್ಯುತ್ತಮ ಪರಿಹಾರ ನೀಡಲಿದೆ. ಯಾರೂ ಅನ್ಯಥಾ ಭಾವಿಸಬೇಕಿಲ್ಲ ಯಡಿಯೂರಪ್ಪನವರು ನೆರೆ ಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ ಅಂತೆಲ್ಲಾ ಹೋದಲ್ಲಿ ಬಂದಿಲ್ಲಿ ಹೇಳಿಕೆ ಕೊಡುತ್ತಿದ್ದ ಸಚಿವರುಗಳ ಮತುಗಳೆಲ್ಲ ಸುಳ್ಳು ಎನ್ನುವುದು ಸಾಬೀತಾಗಿದೆ. ಇಷ್ಟು ದಿನ ಅವರು ಬರೀ ಪುಂಗಿ ಊದಿದ್ದಾರೆ. ಯಾಕಂದ್ರೆ ಸರ್ಕಾರದ ಬಳಿ ಹಣವೇ ಇಲ್ಲ ಎಂದು ಸ್ವತಃ ಸಿಎಂ ಅವರೇ ಒಪ್ಪಿಕೊಂಡಿದ್ದಾರೆ. 

ಬೆಳಗಾವಿ, [ಅ.03]:  ರಾಜ್ಯದಲ್ಲಿ ಉಂಟಾಗಿರುವ ನೆರೆ ಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆಂದು ಹೇಳಿಕೊಂಡು ಸುತ್ತಾಡುತ್ತಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಸಲಿ ಮಾತು ಬಯಲಾಗಿದೆ.

"

 ನೆರೆಗೆ ಖರ್ಚು ಮಾಡಲು ಸರ್ಕಾರ ಬಳಿ ಹಣ ಇಲ್ಲ ಎಂದು ಸ್ವತಃ ಯಡಿಯೂರಪ್ಪನವರೇ ಸತ್ಯ ಒಪ್ಪಿಕೊಂಡಿದ್ದಾರೆ. ಇದು ಅಚ್ಚರಿ ಅನ್ನಿಸಿದರೂ ಸತ್ಯ. ಇಂದು [ಗುರುವಾರ] ನೆರೆ ಹಾನಿ ಬಗ್ಗೆ ಬೆಳಗಾವಿಯ ಜಿಪಂ ಸಭಾಗಂಣದಲ್ಲಿ ನಡೆದ ಸಭೆಯಲ್ಲಿ ಯಡಿಯೂಪ್ಪ ಅವರು ಈ ಸತ್ಯಾಂಶವನ್ನು ಹೊರಹಾಕಿದರು. 

ನೆರೆ ಪರಿಹಾರ ತನ್ನಿ ಎಂದಿದಕ್ಕೆ ಚಕ್ರವರ್ತಿ ವಿರುದ್ಧ ಸಿಂಹ ಘರ್ಜನೆ

ಸಭೆಯಲ್ಲಿ ಬೆಳೆ ಪರಿಹಾರ ಬಗ್ಗೆ ಪ್ರಶ್ನಿಸಿದ ಸವದತ್ತಿ ಕ್ಷೇತ್ರದ ಬಿಜೆಪಿ ಶಾಸಕ ಆನಂದ ಮಾಮನಿ, ಕೇಂದ್ರ ಸರ್ಕಾರ ನೀಡಿದ ಹಣದ ಜತೆಗೆ ರಾಜ್ಯ ಸರ್ಕಾರದ ಹಣ ಸೇರಿಸಿ ಕೊಡಿ ಎಂದು ಯಡಿಯೂರಪ್ಪ ಬಳಿ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಬಿಎಸ್ ವೈ, ಹೇ‌ ಮಾಮನಿ ನಿನಗೆ ಸೂಕ್ಷ್ಮವಾಗಿ ಒಂದು ಮಾತು ಹೇಳುತ್ತೇನೆ ಕೇಳು‌. ಎಲ್ಲಿದೆ ರಾಜ್ಯ ಸರ್ಕಾರದಲ್ಲಿ ಹಣ? ಎಲ್ಲಾ  ಖಾಲಿಯಾಗಿದೆ ಎಂದು ಅಸಹಾಯಕತೆಯಿಂದ ಹೇಳಿದರು. 

ಪ್ರವಾಹ ಸಂಭವಿಸಿ ಎರಡು ತಿಂಗಳುಗಳು ಕಳೆಯುತ್ತಾ ಬಂತು ಕೇಂದ್ರ ಸರ್ಕಾರದಿಂದ ತಂಡ ಬಂತು, ಖುದ್ದು ಗೃಹ ಸಚಿವ ಅಮಿತ್ ಶಾ ಹಾಗೂ ನಿರ್ಮಲಾ ಸೀತಾರಾಮನ್ ನೋಡಿಕೊಂಡು ಹೋದರು. ಆದ್ರೆ, ಅದರ ಬಗ್ಗೆ ಇದುವರೆಗೂ ತುಟಿಕ್-ಪಿಟಿಕ್ ಅಂದಿಲ್ಲ. ಇದ್ರಿಂದ ರಾಜ್ಯದ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಸರ್ಕಾರ ನೀಡುವ ಪರಿಹಾರವೊಂದರಿಂದಲೇ ಸಂತ್ರಸ್ತರ ಬದುಕನ್ನು ಸರಿ ಮಾಡಲು ಸಾಧ್ಯವೇ?

ಮೋದಿಯವರಿಗೆ ಕರ್ನಾಟಕ ಅಂದ್ರೆ ಏಕೆ ಇಷ್ಟು ನಿರ್ಲಕ್ಷ್ಯ? ಅಂತೆಲ್ಲ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನಗಳು ವ್ಯಕ್ತವಾಗುತ್ತಿವೆ. ಮತ್ತೊಂದೆಡೆ ರಾಜ್ಯ ಬಿಜೆಪಿ ಸಂಸದರು ಮಾತ್ರ ರಾಜ್ಯದಲ್ಲಿ ಯಡಿಯೂರಪ್ಪನವರು ನೆರೆಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಕೇಂದ್ರ ಸರ್ಕಾರದಿಂದ ಬರುವುದು ಸ್ವಲ್ಪ ತಡವಾಗುತ್ತೆ ಅಂತೆ ಉದ್ದುದ್ದ ಭಾಷಣ ಬಿಗಿಯುತ್ತಿದ್ದಾರೆ.

ಕೇಂದ್ರ ಸರ್ಕಾರದ ಹಣ ಬೇಕಿಲ್ಲ ಎಂದು ಇತ್ತೀಚೆಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿ ರಾಜ್ಯದ ಜನರ ಕೆಂಗಣ್ಣಿಗೆ ಗುರಿಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೋದಿ ಅವರೇ ನನ್ನ ಗಂಡ ವಿಕ್ರಂನನ್ನು ಪಾಕಿಸ್ತಾನಕ್ಕೆ ಕಳುಹಿಸಿ: ಪಾಕ್ ಮಹಿಳೆಯ ಮನವಿ
ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್