ಹ್ಯಾಕರ್ ತಡೆಗೆ ಕೇಂದ್ರ ಮಾಹಿತಿ ತಂತ್ರಜ್ಞಾನ ಇಲಾಖೆ ಕ್ರಮ

Published : Dec 14, 2016, 05:25 PM ISTUpdated : Apr 11, 2018, 12:42 PM IST
ಹ್ಯಾಕರ್ ತಡೆಗೆ ಕೇಂದ್ರ ಮಾಹಿತಿ ತಂತ್ರಜ್ಞಾನ ಇಲಾಖೆ ಕ್ರಮ

ಸಾರಾಂಶ

ಸಾಮಾಜಿಕ ಜಾಲತಾಣ ಟ್ವಿಟರ್, ಪೇಮೆಂಟ್ ಮತ್ತು ವ್ಯಾಲೆಟ್ ಸೇರಿದಂತೆ ಆರ್ಥಿಕ ಉದ್ಯಮಗಳು ತಮ್ಮ ನೆಟ್‌ವರ್ಕ್‌ಗಳನ್ನು ಬಲಗೊಳಿಸುವಂತೆ ಸೂಚಿಸಲಾಗಿದ್ದು, ಅಹಿತಕರ ಘಟನೆ ಬಗ್ಗೆ ಸಚಿವಾಲಯಕ್ಕೆ ತಿಳಿಸುವಂತೆ ಸೂಚಿಸಲಾಗಿದೆ.

ನವದೆಹಲಿ(ಡಿ.14): ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಉದ್ಯಮಿ ಮಲ್ಯ, ಪತ್ರಕರ್ತರಾದ ಬರ್ಖಾದತ್, ರವೀಶ್ ಕುಮಾರ್ ಅವರ ಟ್ವಿಟರ್ ಖಾತೆಗಳಿಗೆ ಲಿಜನ್ ಗ್ರೂಪ್ ಕನ್ನ ಹಾಕಿದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪಾವತಿ ನಿಗಮ(ಎನ್‌ಪಿಸಿಐ) ಸಂಸ್ಥೆಯ ಜತೆ ಆರ್ಥಿಕ ವಲಯದ ಪರಿಶೀಲನೆ ಸೇರಿದಂತೆ ಇತರ ಕ್ರಮ ಕೈಗೊಳ್ಳುವಂತೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಆದೇಶಿಸಿದೆ. ಅಲ್ಲದೆ, ಶಂಕಿತ ಚಟುವಟಿಕೆಗಳ ಪತ್ತೆಗಾಗಿ 16 ವರ್ಷಗಳ ಐಟಿ ಕಾಯ್ದೆ ಬದಲಾವಣೆಗೆ ಯೋಜನೆ ರೂಪಿಸಲಾಗಿದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್, ಪೇಮೆಂಟ್ ಮತ್ತು ವ್ಯಾಲೆಟ್ ಸೇರಿದಂತೆ ಆರ್ಥಿಕ ಉದ್ಯಮಗಳು ತಮ್ಮ ನೆಟ್‌ವರ್ಕ್‌ಗಳನ್ನು ಬಲಗೊಳಿಸುವಂತೆ ಸೂಚಿಸಲಾಗಿದ್ದು, ಅಹಿತಕರ ಘಟನೆ ಬಗ್ಗೆ ಸಚಿವಾಲಯಕ್ಕೆ ತಿಳಿಸುವಂತೆ ಸೂಚಿಸಲಾಗಿದೆ. ‘‘ಭಾರತದಲ್ಲಿರುವ ಮಾಹಿತಿ ತಂತ್ರಜ್ಞಾನದ ಇಡೀ ಮೂಲಭೂತ ಸೌಲಭ್ಯ ಭದ್ರತೆಯ ಗಟ್ಟಿತನದ ಬಗ್ಗೆ ಪರಿಶೀಲನೆಗೊಳಪಡಿಸಲು ಆದೇಶಿಸಲಾಗಿದೆ,’’ ಎಂದು ಸಚಿವ ಪ್ರಸಾದ್ ಹೇಳಿದ್ದಾರೆ.

ದೇಶದಲ್ಲಿ ನಗದು ರಹಿತ ವ್ಯವಹಾರಕ್ಕೆ ಸಂಬಂಸಿ ಸೂಕ್ತ ಭದ್ರತೆ ಒದಗಿಸಲಾಗಿದ್ದು, ಡಿಜಿಟಲ್ ಪಾವತಿ ಬಗ್ಗೆ ಯಾವುದೇ ಭೀತಿ ಪಡಬೇಕಿಲ್ಲ ಎಂದಿದ್ದಾರೆ ರವಿಶಂಕರ್ ಪ್ರಸಾದ್. ಈ ಬಗ್ಗೆ ಐಡಿಎಸ್ಸಿ, ಐಸಿಐಸಿಐ, ಎಸ್‌ಬಿಐ , ಕೆನರಾ ಸೇರಿದಂತೆ ಇತರ 50 ಬ್ಯಾಂಕ್ ಭದ್ರತಾ ಮತ್ತು ತಾಂತ್ರಿಕ ಅಕಾರಿಗಳ ಜತೆ ಸಚಿವ ರವಿಶಂಕರ್ ಪ್ರಸಾದ್ ಅವರು ಸಮಾಲೋಚನೆ ನಡೆಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರೀತಿಸಿ ಮದುವೆಯಾದ ಮಗಳ ರಕ್ತದಲ್ಲಿ ಕೈ ತೊಳೆದ ತಂದೆ; ಹುಬ್ಬಳ್ಳಿಯಲ್ಲಿ ಮರ್ಯಾದ ಹ*ತ್ಯೆ
ಹೂವಿನಹಡಗಲಿ: ಕೇಳಿದ್ದು 237 ಕೊಠಡಿ, ಸರ್ಕಾರ ಕೊಟ್ಟಿದ್ದು ಒಂದೇ ಕೊಠಡಿ! ಮಕ್ಕಳ ಶಿಕ್ಷಣಕ್ಕೆ ಇಲ್ವಾ ಬೆಲೆ?