
ಚೆನ್ನೈ(ಅ.06): ಸಿಎಂ ಜಯಲಲಿತಾ ಆರೋಗ್ಯ ಮಾಹಿತಿ ನೀಡಲು ಕೋರಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದ್ದು, ಆರೋಗ್ಯ ಮಾಹಿತಿ ನೀಡಲು ನಿರಾಕರಿಸಿದೆ.
ಕಳೆದ 15 ದಿನಗಳಿಂದ ಯಕ್ಷ ಪ್ರಶ್ನೆಯಾಗಿ ಉಳಿದಿರುವ ಸಿಎಂ ಜಯಲಲಿತಾ ಆರೋಗ್ಯದ ಮಾಹಿತಿಯನ್ನ ಬಹಿರಂಗ ಪಡಿಸದ ಹಿನ್ನೆಲೆಯಲ್ಲಿ, ಮಾಹಿತಿ ಕೋರಿ ಸಾಮಾಜಿಕ ಕಾರ್ಯಕರ್ತ ಟ್ರಾಫಿಕ್ ರಾಮಸ್ವಾಮಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿ ಮದ್ರಾಸ್ ಹೈಕೋರ್ಟ್ ಆದೇಶ ಹೊರಡಿಸಿದೆ.
ಕಳೆದ ವಾರ ಅರ್ಜಿ ಅಂಗಿಕರಿಸಿ ಆರೋಗ್ಯ ಮಾಹಿತಿ ನೀಡುವಂತೆ ಆದೇಶಿಸಿದ್ದ ಕೋರ್ಟ್, ಇಂದು ಈ ಅರ್ಜಿ ಕೇವಲ ಪ್ರಚಾರಕ್ಕೆ ಅರ್ಜಿ ಸಲ್ಲಿಸಿದಂತೆ ಇದೆ ಎಂದು ಅಭಿಪ್ರಾಯ ಪಟ್ಟು ಅರ್ಜಿಯನ್ನೇ ತಿರಸ್ಕರಿಸಿದೆ. ಕೋರ್ಟ್ನ ಈ ದ್ವಂದ್ವ ಹೇಳಿಕೆ ಅಚ್ಚರಿಯುಂಟು ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.