KPCC ಗಾದಿಗೆ ಮಲ್ಲಿಕಾರ್ಜುನ ಖರ್ಗೆ ಹಿಂದೇಟು? ನಾಯಕರೆದುರು ಖರ್ಗೆ ಹೇಳಿದ್ದೇನು?

Published : May 16, 2017, 10:47 AM ISTUpdated : Apr 11, 2018, 12:34 PM IST
KPCC ಗಾದಿಗೆ ಮಲ್ಲಿಕಾರ್ಜುನ ಖರ್ಗೆ ಹಿಂದೇಟು? ನಾಯಕರೆದುರು ಖರ್ಗೆ ಹೇಳಿದ್ದೇನು?

ಸಾರಾಂಶ

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಬಲವಾಗಿ ಕೇಳಿಬರುತ್ತಿದ್ದರೂ, ಈ ಹುದ್ದೆ ವಹಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ.

ನವದೆಹಲಿ(ಮೇ.16): ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಬಲವಾಗಿ ಕೇಳಿಬರುತ್ತಿದ್ದರೂ, ಈ ಹುದ್ದೆ ವಹಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ.

ಲೋಕಸಭೆಯಲ್ಲಿ ಕಾಂಗ್ರೆ​ಸ್‌'ನ ನಾಯಕರಾಗಿರುವ ಖರ್ಗೆ, ಬೇರೆ ಪಕ್ಷದಿಂದ ಬಂದ ಸಿದ್ದರಾಮಯ್ಯ ಅವರು ಕರ್ನಾಟಕಕ್ಕೆ ಮುಖ್ಯಮಂತ್ರಿಯಾಗಿರುವಾಗ ತಾವೇಕೆ ಈಗ ಕೆಪಿಸಿಸಿ ಅಧ್ಯಕ್ಷರಾಗಲಿ ಎಂದು ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯ ಕಾಂಗ್ರೆಸ್​​ ಉಸ್ತುವಾರಿ ವೇಣುಗೋಪಾಲ್​​, ಎರಡು ಬಾರಿ ರಾಹುಲ್​​ ಗಾಂಧಿ ಜೊತೆ ಚರ್ಚೆ ನಡೆಸಿದರೂ ಯಾರನ್ನು ಅಧ್ಯಕ್ಷರನ್ನಾಗಿ ಮಾಡಬೇಕು ಎಂಬುದು ಸ್ಪಷ್ಟ​ವಾಗುತ್ತಿಲ್ಲ. ಖರ್ಗೆ ಹೆಸರು ಕಳೆದ ಒಂದು ವಾರದಿಂದ ಕೇಳಿ ಬರುತ್ತಿದೆಯಾದರೂ ಖರ್ಗೆಗೆ, ದೆಹಲಿ ಬಿಟ್ಟು ಬರಲು ಇಷ್ಟವಿಲ್ಲ ಅಂತ ಹೇಳಲಾಗುತ್ತಿದೆ. ಸಿದ್ದರಾಮಯ್ಯರನ್ನು ಮುಖ್ಯಮಂತ್ರಿ ಮಾಡಿ ಕೂರಿಸಿ​ರು​ವಾಗ ನಾನೇಕೆ ಈಗ ಪಕ್ಷದ ಜವಾಬ್ದಾರಿ ಹೊರಲಿ ಎಂದು ಹೈಕಮಾಂಡ್‌'ನ ಕೆಲ ನಾಯಕರ ಮುಂದೆ ಖರ್ಗೆ ಹೇಳಿಕೊಂಡಿದ್ದಾರೆ ಅಂತ ಸುವರ್ಣ ನ್ಯೂಸ್​​ ಹಾಗೂ ಕನ್ನಡ ಪ್ರಭಕ್ಕೆ ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಗನ ಬರ್ತ್‌ಡೇಗಾಗಿ ರಸ್ತೆ ಬಂದ್ ಮಾಡಿ ದರ್ಪ; 'ನಾನೊಬ್ಬ ಸೆಲೆಬ್ರಿಟಿ' ಎಂದ ಉದ್ಯಮಿಗೆ ಒದ್ದು ಜೈಲಿಗೆ ದಬ್ಬಿದ ಪೊಲೀಸರು!
ಡಿ.25ಕ್ಕೆ ಸಾಲು ಸಾಲು ದುರಂತ, ಲಾರಿ ಬೈಕ್ ಭೀಕರ ಅಪಘಾತದಲ್ಲಿ ನಾಲ್ವರು ಸಾವು