
ಬೆಳಗಾವಿ (ಜ.29): ಇಲ್ಲಿನ ಬಡೆಕೊಳ್ಳಮಠದಲ್ಲಿ ಕಳ್ಳರು ಕೈ ಚಳಕ ತೋರಿಸಿದ್ದಾರೆ.
ಬಡೆಕೊಳ್ಳಕೊಳ್ಳ ಮಠದ ನಾಗೇಂದ್ರ ಅಜ್ಜನವರ ಮೂಲ ಗದ್ದುಗೆಯ ಬೆಳ್ಳಿ ಆಭರಣ ಹಾಗೂ ಕಾಳಿಕಾ ಮಂದಿರದಲ್ಲಿನ ಕಾಳಿಕಾದೇವಿ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ದೋಚಿ ಕಳ್ಳರು ಪರಾರಿಯಾಗಿದ್ದಾರೆ.
ಸುಮಾರು 2 ಲಕ್ಷ 40 ಸಾವಿರ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ. ಮಠದ ನಾಗೇಂದ್ರ ಅಜ್ಜನವರ 65 ಸಾವಿರ ಮೌಲ್ಯದ 1 ಕೆಜಿ 4 ಗ್ರಾಂ ಬೆಳ್ಳಿಯ ಮುಖವಾಡ,22, 500 ಸಾವಿರ ಮೌಲ್ಯದ ಅರ್ಧ ಕೆಜಿ ಬೆಳ್ಳಿ ಪಾದುಕೆಗಳು ಸೇರಿದಂತೆ 2.40 ಲಕ್ಷ ರೂಪಾಯಿ ಮೌಲ್ಯದ ನಗ ನಾಣ್ಯ ದೋಚಿ ಕಳ್ಳರು ಪರಾರಿಯಾಗಿದ್ದಾರೆ.
ನಿನ್ನೆ ತಡರಾತ್ರಿಯಲ್ಲಿ ಕಳ್ಳತನ ನಡೆದಿದ್ದು ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಕುರಿತು ಹಿರೇಬಾಗೆವಾಡಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಬೆಳಗಾವಿ ಪೊಲೀಸರು ಕಳ್ಳರಿಗೆ ಬಲೆ ಬೀಸಿದ್ದಾರೆ.
-ಸಾಂದರ್ಭಿಕ ಚಿತ್ರ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.