ಮೆಟ್ಟೂರು ಡ್ಯಾಂನಲ್ಲಿ ಬೇಕಾದಷ್ಟು ನೀರಿದ್ದರೂ ತಮಿಳುನಾಡು ನೀರಿಗಾಗಿ ಸುಪ್ರೀಂ ಮೊರೆಹೋಗಿದೆ - ಸಿಎಂ

Published : Sep 10, 2016, 04:51 AM ISTUpdated : Apr 11, 2018, 12:51 PM IST
ಮೆಟ್ಟೂರು ಡ್ಯಾಂನಲ್ಲಿ ಬೇಕಾದಷ್ಟು ನೀರಿದ್ದರೂ ತಮಿಳುನಾಡು ನೀರಿಗಾಗಿ ಸುಪ್ರೀಂ ಮೊರೆಹೋಗಿದೆ - ಸಿಎಂ

ಸಾರಾಂಶ

ನಾವು ಕುಡಿಯಲು ನೀರು ಕೇಳಿದರೆ, ತಮಿಳುನಾಡಿನವರು ಬೆಳೆಗೆ ನೀರು ಕೇಳುತ್ತಿದ್ದಾರೆ - ಸಿದ್ದರಾಮಯ್ಯ

ಬೆಂಗಳೂರು(ಸೆ.10): ನದಿ ನೀರಿನ ಸಮಸ್ಯೆ ಬಗೆಹರಿಯಲು ಕೇಂದ್ರ ಸರ್ಕಾರ ಶೀಘ್ರವೇ ರಾಷ್ಟ್ರೀಯ ಜಲ ನೀತಿ ಜಾರಿಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ತೆಲಗು ವಿಜ್ನಾನ ವೇದಿಕೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶ್ರೀಕೃಷ್ಣದೇವರಾಯ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ದೇಶದಲ್ಲಿ ಕೋರ್ಟ್ ಆದೇಶದಿಂದ ಅಂತಾರಾಜ್ಯ ನದಿ ನೀರಿನ ಸಮಸ್ಯೆ ಪರಿಹರಿಸಲು ಸಾಧ್ಯವಿಲ್ಲ. ಕೇವಲ ಮಾತುಕತೆಯ ಮೂಲಕವೇ ಪರಿಹರಿಸಿಕೊಳ್ಳಬೇಕು ಎಂದು ಹೇಳಿದರು. ಕಾವೇರಿ ನೀರಿನ ಸಮಸ್ಯೆಯನ್ನು ಮನಸ್ಸು ಮಾಡಿದ್ದರೆ ಮಾತುಕತೆಯ ಮೂಲಕವೇ ಬಗೆ ಹರಿಸಿಕೊಳ್ಳಬಹುದಿತ್ತು. ಆದರೆ, ತಮಿಳುನಾಡು ಮತ್ತೆ ಸುಪ್ರೀಂ ಕೋರ್ಟ್​ನಲ್ಲಿ ಮನವಿ ಸಲ್ಲಿಸಿದೆ.ಈಗ ಸುಪ್ರೀಂ ಕೋರ್ಟ್ ಆದೇಶ ಪಾಲಿಸಲು ಕಷ್ಟವಾಗುತ್ತಿದೆ.

 

ಮೆಟ್ಟೂರು ಡ್ಯಾಂನಲ್ಲಿ ಅವರಿಗೆ ಬೇಕಾದಷ್ಟು ನೀರು ಇದೆ. ಆದರೂ ತಮಿಳುನಾಡು ಸುಪ್ರೀಂಕೋರ್ಟ್`ನಲ್ಲಿ ನೀರಿಗೆ ಮನವಿ ಮಾಡಿದೆ. ಸುಪ್ರೀಂಕೋರ್ಟ್ ಆದೇಶವನ್ನು ನಾವು ಭಾರವಾದ ಮನಸ್ಸಿನಿಂದ ಪಾಲಿಸುತ್ತಿದ್ದೇವೆ. ನಾವು ಕುಡಿಯಲು ನೀರು ಕೇಳಿದರೆ, ತಮಿಳುನಾಡಿನವರು ಬೆಳೆಗೆ ನೀರು ಕೇಳುತ್ತಿದ್ದಾರೆ. ಹೀಗಾಗಿ, ಸುಪ್ರೀಂ ಕೋರ್ಟ್ ಆದೇಶ ಪರಿಷ್ಕರಣೆ ಮಾಡುವಂತೆ ಮನವಿ ಮಾಡಲಾಗುವುದು. ಅಲ್ಲದೇ, ಪ್ರಧಾನಿ ಮಧ್ಯಸ್ಥಿಕೆ ವಹಿಸುವಂತೆಯೂ ಪತ್ರ ಬರೆಯಲಾಗಿದೆ ಎಂದು ಸಿಎಂ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

8 ಕೋಟಿ ಮೌಲ್ಯದ ಆನ್‌ಲೈನ್ ವಂಚನೆ ಬಗ್ಗೆ ಡೆತ್‌ನೋಟ್ ಬರೆದಿಟ್ಟು ಗುಂಡು ಹಾರಿಸಿಕೊಂಡ ಮಾಜಿ ಐಜಿ
ಬರೋಬ್ಬರಿ 6 ವರ್ಷಗಳ ಬಳಿಕ ಸಂಚಾರಕ್ಕೆ ಮುಕ್ತವಾಗಲಿದೆ ಬೆಂಗಳೂರಿನ ಕಾಮರಾಜ್‌ ರಸ್ತೆ!