
ಮಂಗಳೂರು(ಡಿ.06): ಹಿಂದುಗಳು ಪೂಜಿಸುವ ಶ್ರೀರಾಮ ಹುಟ್ಟಿರುವುದಕ್ಕೆ ಯಾವುದೇ ದಾಖಲೆಗಳಿಲ್ಲ ಎಂದು ಹಿಂದುಳಿದ ವರ್ಗಗಳ ಮಾಜಿ ಅಧ್ಯಕ್ಷ ಸಿ.ಎಸ್ ದ್ವಾರಕ್'ನಾಥ್ ಹೇಳಿದ್ದಾರೆ.
ಮಂಗಳೂರಿನ ಪುರಭವನದಲ್ಲಿ ನಡೆದ ಬಾಬರಿ ಮಸೀದಿ ಧ್ವಂಸ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಇತಿಹಾಸದಲ್ಲಿ ಬುದ್ಧ, ಕ್ರಿಸ್ತ, ಪೈಗಂಬರ್ ಹುಟ್ಟಿರುವುದಕ್ಕೆ ಸಾಕ್ಷಿಯಿದೆ. ಆದರೆ ರಾಮನ ಕುರಿತು ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದ್ದಾರೆ.
ನಮಗೆ ಹೆಚ್ಚೆಂದರೆ ಮೂರು ತಲೆಮಾರು ನೆನಪಿರುತ್ತದೆ. ಅಂತಹದ್ದರಲ್ಲಿ 9 ಲಕ್ಷ ವರ್ಷಗಳ ಹಿಂದೆ ಹುಟ್ಟಿರುವ ವ್ಯಕ್ತಿಯ ಬಗ್ಗೆ ಮಾತನಾಡುತ್ತಾರೆ ಅಂದ್ರೆ ಅವರಿಗೆ ಏನು ಹೇಳಬೇಕು ಎಂದು ಅರ್ಥವಾಗ್ತಾಯಿಲ್ಲ ಎಂದು ಹೇಳಿದ್ದಾರೆ.
ದ್ವಾರಕ್'ನಾಥ್ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಪರ-ವಿರೋದ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.