ರಾಜ್ಯದಲ್ಲಿ ಯೋಧನ ಕುಟುಂಬಕ್ಕಿಲ್ಲ ರಕ್ಷಣೆ..!

Published : Nov 22, 2017, 04:14 PM ISTUpdated : Apr 11, 2018, 01:09 PM IST
ರಾಜ್ಯದಲ್ಲಿ ಯೋಧನ ಕುಟುಂಬಕ್ಕಿಲ್ಲ ರಕ್ಷಣೆ..!

ಸಾರಾಂಶ

ಮಂಜುನಾಥ ಒರಿಸ್ಸಾದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಜೀವನ ನಿರ್ವಹಣೆಗಾಗಿ ಯೋಧನ ತಾಯಿ ರಾಮಲಕ್ಷ್ಮಮ್ಮ, ತಂದೆ ಸಣ್ಣಪಯ್ಯ ಸಣ್ಣ ಅಂಗಡಿ ನಡೆಸುತ್ತಿದ್ದರು. ಆದರೆ ಮೂರು ತಿಂಗಳ ಹಿಂದೆ ಈ ಅಂಗಡಿಗೆ ಯಾರೋ ಕಿಡಿಗೇಡಿಗಳು ಬೆಂಕಿಯಿಟ್ಟಿದ್ದಾರೆ.

ಪಾವಗಡ(ನ.22): ದೇಶದ ರಕ್ಷಣೆಗಾಗಿ ಹಗಲುರಾತ್ರಿ ಎನ್ನದೆ ತನ್ನ ಜೀವವನ್ನೇ ಪಣಕಿಟ್ಟು ದುಡಿಯುವ ಯೋಧನ ಕುಟುಂಬಕ್ಕೆ ರಾಜ್ಯದಲ್ಲೇ ರಕ್ಷಣೆ ಇಲ್ಲದಂತಾಗಿದೆ.

ಹೌದು, ತುಮಕೂರಿನ ಪಾವಗಡದ ಹೌಸಿಂಗ್ ಬೋರ್ಡ್'ನಲ್ಲಿ ಯೋಧನ ಕುಟುಂಬ ಆತಂಕದಿಂದ ಜೀವನ ನಡೆಸುತ್ತಿದ್ದಾರೆ. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಯೋಧ ಮಂಜುನಾಥ್ ಕುಟುಂಬಕ್ಕೆ ಸೇರಿದ ಅಂಗಡಿಗೆ ಕಿಡಿಗೇಡಿಗಳು ಬೆಂಕಿಯಿಟ್ಟಿದ್ದಾರೆ. ಮಂಜುನಾಥ ಒರಿಸ್ಸಾದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಜೀವನ ನಿರ್ವಹಣೆಗಾಗಿ ಯೋಧನ ತಾಯಿ ರಾಮಲಕ್ಷ್ಮಮ್ಮ, ತಂದೆ ಸಣ್ಣಪಯ್ಯ ಸಣ್ಣ ಅಂಗಡಿ ನಡೆಸುತ್ತಿದ್ದರು. ಆದರೆ ಮೂರು ತಿಂಗಳ ಹಿಂದೆ ಈ ಅಂಗಡಿಗೆ ಯಾರೋ ಕಿಡಿಗೇಡಿಗಳು ಬೆಂಕಿಯಿಟ್ಟಿದ್ದಾರೆ.

ಲಕ್ಷ್ಮಿನರಸಮ್ಮ ಹಾಗೂ ರಾಮಕೃಷ್ಣ  ಎಂಬುವರ ಮೇಲೆ ಪಾವಗಡ ಪೊಲೀಸ್ ಠಾಣೆಗೆ ಯೋಧನ ತಂದೆ ದೂರು ನೀಡಿದ್ದಾರೆ. ಆದರೆ ಪೊಲೀಸರು ಯಾವುದೇ ತನಿಖೆ ನಡೆಸುತ್ತಿಲ್ಲ, ಇನ್ನೂ  ಲಕ್ಷ್ಮಿನರಸಮ್ಮ ಹಾಗೂ ರಾಮಕೃಷ್ಣಯ್ಯನವರು ಯೋಧನ ಪೋಷಕರ ಮೇಲೆ ನಿತ್ಯ ಕಿರುಕುಳ ಮುಂದುವರಿಸುತ್ತಿದ್ದಾರಂತೆ.  ಅಂಗಡಿ ಜಾಗ ಬಿಟ್ಟುಕೊಡುವಂತೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ. ನ್ಯಾಯಕ್ಕಾಗಿ ಯೋಧನ ಕುಟುಂಬ ನಿತ್ಯ ಕಣ್ಣರಿನಲ್ಲೇ ಕೈ ತೊಳೆಯುವಂತಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಂಬೈ ಹೌಸಿಂಗ್ ಕಾಂಪ್ಲೆಕ್ಸ್‌ನಲ್ಲಿ ಅಗ್ನಿ ದುರಂತ, ನಿರ್ದೇಶಕ ಸಂದೀಪ್ ಸಿಂಗ್ ಸೇರಿ 40 ಮಂದಿ ರಕ್ಷಣೆ
ಹೊಸ ವರ್ಷಕ್ಕೆ ಎಲೆಕ್ಟ್ರಾನಿಕ್ ಸಿಟಿ ಹೈ ಅಲರ್ಟ್; ಮಹಿಳೆಯರ ಸುರಕ್ಷತೆಗೆ 'ರಾಣಿ ಚೆನ್ನಮ್ಮ ಪಡೆ ಸಜ್ಜು, ಪಬ್-ಬಾರ್‌ಗಳಿಗೆ ಪೊಲೀಸರ ಬಿಗಿ ರೂಲ್ಸ್!