ಯೋಗೀಶ್ ಗೌಡ ಹತ್ಯೆ ಪ್ರಕರಣ: ಇದರಲ್ಲಿ ನನ್ನ ಪಾತ್ರವಿಲ್ಲ, ಇದು ಬಿಜೆಪಿ ಕುತಂತ್ರ

Published : Nov 23, 2017, 12:10 PM ISTUpdated : Apr 11, 2018, 12:48 PM IST
ಯೋಗೀಶ್ ಗೌಡ ಹತ್ಯೆ ಪ್ರಕರಣ: ಇದರಲ್ಲಿ ನನ್ನ ಪಾತ್ರವಿಲ್ಲ, ಇದು ಬಿಜೆಪಿ ಕುತಂತ್ರ

ಸಾರಾಂಶ

ಯೋಗೀಶ್ ಗೌಡ ಕೊಲೆ ಪ್ರಕರಣದ ಎಕ್ಸ್ಲೂಸಿವ್ ವಿಚಾರವನ್ನು ಸುವರ್ಣನ್ಯೂಸ್ ಪ್ರಸಾರ ಮಾಡುತ್ತಿದ್ದಂತೆ ವಿಧಾನ ಪರಿಷತ್, ವಿಧಾನ ಸಭೆಯಲ್ಲಿ ಪ್ರತಿಧ್ವನಿಸಿತು. ವರದಿಯನ್ನು ನೋಡಿ  ಸರ್ಕಾರವೇ ಬೆಚ್ಚಿಬಿದ್ದಿದೆ.  ನನಗೂ, ಈ ಕೊಲೆಗೂ ಯಾವುದೇ ಸಂಬಂಧವಿಲ್ಲ ಎಂದು ಧಾರವಾಡದಲ್ಲಿ ಗಣಿ, ಭೂ ವಿಜ್ಞಾನ ಸಚಿವ ವಿನಯ್​ ಕುಲಕರ್ಣಿ ಹೇಳಿದ್ದಾರೆ.  

ಬೆಂಗಳೂರು (ನ.23): ಯೋಗೀಶ್ ಗೌಡ ಕೊಲೆ ಪ್ರಕರಣದ ಎಕ್ಸ್ಲೂಸಿವ್ ವಿಚಾರವನ್ನು ಸುವರ್ಣನ್ಯೂಸ್ ಪ್ರಸಾರ ಮಾಡುತ್ತಿದ್ದಂತೆ ವಿಧಾನ ಪರಿಷತ್, ವಿಧಾನ ಸಭೆಯಲ್ಲಿ ಪ್ರತಿಧ್ವನಿಸಿತು. ವರದಿಯನ್ನು ನೋಡಿ  ಸರ್ಕಾರವೇ ಬೆಚ್ಚಿಬಿದ್ದಿದೆ.  ನನಗೂ, ಈ ಕೊಲೆಗೂ ಯಾವುದೇ ಸಂಬಂಧವಿಲ್ಲ ಎಂದು ಧಾರವಾಡದಲ್ಲಿ ಗಣಿ, ಭೂ ವಿಜ್ಞಾನ ಸಚಿವ ವಿನಯ್​ ಕುಲಕರ್ಣಿ ಹೇಳಿದ್ದಾರೆ.  

ಕೊಲೆ ಆರೋಪಿಗಳು ಜೈಲಿನಲ್ಲಿದ್ದಾರೆ, ಪ್ರಕರಣ ನ್ಯಾಯಾಲಯದಲ್ಲಿದೆ.  Dysp ಸುಲ್ಫಿ ಬೆಳಗಾವಿಯಲ್ಲಿದ್ದಾರೆ. ಅವರ್ಯಾರು ನನಗೆ ಪರಿಚಯವಿಲ್ಲ. ಮನೆಯಲ್ಲಿದ್ದವರನ್ನು ಕರೆದುಕೊಂಡು ಬಂದು ರಾಜಕಾರಣ ಮಾಡುತ್ತಿದ್ದಾರೆ.  ಇದು ಬಿಜೆಪಿಯ ಕುತಂತ್ರ. ಇದರ ಹಿಂದೆ ಯಾರಿದ್ದಾರೆ ಎಂಬುದು ಗೊತ್ತು.  ಇನ್ನೆರಡು ದಿನಗಳಲ್ಲಿ ಅವರ ಹೆಸರು ಬಹಿರಂಗಪಡಿಸುವೆ.  ಬಿಜೆಪಿಗೆ ಬೇರೆ ವಿಷಯ ಇಲ್ಲ, ಹೀಗಾಗಿ ಕೊಲೆ ಪ್ರಕರಣದಲ್ಲಿ ನನ್ನ ಹೆಸರು ಎಳೆದು ತರುತ್ತಿದ್ದಾರೆ.  ಲಿಂಗಾಯತ ಹೋರಾಟಕ್ಕೆ ಹೆದರಿ ಬಿಜೆಪಿ ನಾಯಕರು ಇಂತಹ ಕೆಲಸ ಮಾಡುತ್ತಿದ್ದಾರೆ.  ಇದಕ್ಕೆ ನಾನು ಹೆದರುವುದಿಲ್ಲ ಎಂದ ಸಚಿವ ವಿನಯ ಕುಲಕರ್ಣಿ ಪ್ರತಿಕ್ರಿಯಿಸಿದ್ದಾರೆ.  

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕ್ರಿಶ್ಚಿಯನ್ನರ ಮೇಲೆ ದಾಳಿ, ಕ್ರಿಸ್‌ಮಸ್ ದಿನವೇ ನೈಜೀರಿಯಾ ಮೇಲೆ ಬಾಂಬ್‌ ದಾಳಿ ಮಾಡಿದ ಅಮೆರಿಕ!
ಮೈಸೂರು ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್‌ ಸ್ಫೋಟ, ಹಲವು ಆಯಾಮದಲ್ಲಿ ಪೊಲೀಸರ ತನಿಖೆ!