
ಮುಂಬೈ(ಜೂ.16): ರಸ್ತೆಯಲ್ಲಿ ಕಸ ಚೆಲ್ಲಿದ ಸಹ ಪ್ರಯಾಣಿಕನೋರ್ವನನ್ನು ಬಾಲಿವುಡ್ ನಟಿ, ಕ್ರಿಕೆಟಿಗ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಅನುಷ್ಕಾ ಯುವಕನೋರ್ವನನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವ ವಿಡಿಯೋವನ್ನು ವಿರಾಟ್ ಶೇರ್ ಮಾಢಿದ್ದಾರೆ.
ಅನುಷ್ಕಾ ತಮ್ಮ ಕಾರಿನಲ್ಲಿ ಹೋಗುತ್ತಿರುವಾಗ ಯುವಕನೋರ್ವ ತನ್ನ ಕಾರಿನಿಂದ ಪ್ಲಾಸ್ಟಿಕ್ ವಸ್ತುವೊಂದನ್ನು ಹೊರ ಚೆಲ್ಲಿದ್ದಾನೆ. ಇದನ್ನು ಕಂಡ ಅನುಷ್ಕಾ, ತಮ್ಮ ಕಾರು ನಿಲ್ಲಿಸಿ ಆತನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅನುಷ್ಕಾ ಮಾತಿಗೆ ಬೆಚ್ಚಿ ಬಿದ್ದ ಯುವಕ ಏನೂ ಮಾತನಾಡದೇ ಹೊರಟು ಹೋಗಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಶೇರ್ ಮಾಡಿರುವ ವಿರಾಟ್, ಇಂತಹವರಿಂದ ಸ್ವಚ್ಛ ಭಾರತವನ್ನು ನಿರೀಕ್ಷಿಸಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.
ಇದೇ ವೇಳೆ ವಿರಾಟ್ ಶೇರ್ ಮಾಡಿರುವ ಈ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದ್ದು, ನೆಟಿಜನ್ಸ್ ಗಳು ಅನುಷ್ಕಾ ಅವರ ಕಾರ್ಯವನ್ನು ಮೆಚ್ಚಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.