
ಬೆಂಗಳೂರು (ಫೆ. 28): ಮಾಜಿ ಯೋಧರಿಗೂ ಸೇಫ್ ಇಲ್ಲದಂದಾಯ್ತು ಸಿಲಿಕಾನ್ ಸಿಟಿ! ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ನಿವೃತ್ತ ಯೋಧನ ಮೇಲೆ ದರೋಡೆಕೋರರು ದಾಳಿ ಮಾಡಿದ್ದಾರೆ.
ಸತೀಶ್ ಎಂಬ ನಿವೃತ್ತ ಯೋಧನ ಮೇಲೆ ಅಟ್ಯಾಕ್ ಮಾಡಿದ ಇಬ್ಬರು ದುಷ್ಕರ್ಮಿಗಳು ಚಾಕು ತೋರಿಸಿ ಹಣ ದರೋಡೆ ಮಾಡಲು ಪ್ರಯತ್ನಿಸಿದ್ದಾರೆ. ನಿನ್ನೆ ರಾತ್ರಿ 12.40 ರ ಸುಮಾರಿಗೆ ಪಲ್ಸರ್ ಬೈಕ್ ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ದರೋಡೆಗೆ ಯತ್ನಿಸಿದ್ದಾರೆ. ಕೆಂಗೇರಿ ಬಳಿಯ ನಾಗದೇವನಹಳ್ಳಿ ಬಸ್ ನಿಲ್ದಾಣದ ಬಳಿ ತಮ್ಮ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.
ಬಿಡದಿಯ ಟಯೋಟ ಲಾಜಿಸ್ಟೀಕ್ ಕಿಶೋರ್ ಕಂಪನಿಯಲ್ಲಿ ನಿವೃತ್ತ ಯೋಧ ಸತೀಶ್ ಕೆಲಸ ಮಾಡುತ್ತಿದ್ದರು. ಈ ವೇಳೆ ಸತೀಶ್ ಕೂಗಾಡಿದಾಗ ಖದೀಮರು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.