
ಬೆಂಗಳೂರು(ನ.11): ಸಮಯ ಸರಿ ಇಲ್ಲದಿದ್ದರೆ ಒದೆ ತಿನ್ನುವುದು ಖಚಿತ ಎನ್ನುವುದಕ್ಕೆ ನಿನ್ನೆ ರಾತ್ರಿ ನಡೆದ ಘಟನೆಯೇ ಕ್ಷಿ. ನಿನ್ನೆ ಕುಡಿದ ಮತ್ತಿನಲ್ಲಿ ಪಟ್ಟೆಗರ ಪಾಳ್ಯದ ಸೇಟು ಒಬ್ಬರಿಗೆ ಮಾರಕಸ್ತ್ರಗಳನ್ನು ತೋರಿಸಿ ದರೋಡೆ ಮಾಡಲು ಬಂದ ಮೂವರಿಗೆ ಸಾರ್ವಜನಿಕರಿಂದ ಧರ್ಮದೇಟು ಬಿದ್ದಿವೆ.
ಹಡಮತ್ ಎಂಬುವವರು ತಮ್ಮ ಡೆಕೋರೇಟ್ ಅಂಗಡಿಯ ವ್ಯಾಪಾರ ಮುಗಿಸಿ ಬಾಗಿಲು ಹಾಕಿ ಮನೆಗೆ ಏಂಟು ವರ್ಷದ ಹುಡುಗನ ಜೊತೆ ತೆರಳುತ್ತಿದ್ದರು. ಇದೇ ವೇಳೆ ಅಲ್ಲೇ ಇದ ಬಾರಿನಲ್ಲಿ ಕುಡಿದು ಬಂದ ಏಳು ಮಂದಿ ಹಡಮತ್ ಹಾಗೂ ಹುಡುಗನ ಮೇಲೆ ದಾಳಿ ಮಾಡಿ ಮಾರಕಾಸ್ತ್ರ ತೋರಿಸಿ ಪರ್ಸ್ ಹಾಗೂ ಮೊಬೈಲ್ ಕಸಿದುಕೊಂಡು ಹಲ್ಲೆ ಮಾಡಿದ್ದಾರೆ.
ಇವರ ರಂಪಾಟ ನೋಡಿದ ಸಾರ್ವಜನಿಕರು ಸಹಾಯಕ್ಕೆ ದೌಡಾಯಿಸಿದ್ದಾರೆ, ಆಗ ಮೂವರು ತಪ್ಪಿಸಿಕೊಂಡಿದು, ಮೂವರು ಸ್ಥಳೀಯರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಈ ಮೂವರಿಗೂ ಹಣ್ಣುಗಾಯಿ ನಿರುಗಾಯಿ ಆಗುವಂತೆ ಥಳಿಸಿದ ಸಾರ್ವಜನಿಕರು ವಿಜಯನಗರ ಪೊಲೀಸರಿಗೆ ಒಪ್ಪಿಸಿದ್ದಾರೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.