ಆಂಧ್ರ ಭವನದಲ್ಲಿ ತೃತೀಯ ರಂಗದ ನಾಯಕರು: ಏನು ಮಾತುಕತೆ?

Published : Jun 16, 2018, 09:17 PM IST
ಆಂಧ್ರ ಭವನದಲ್ಲಿ ತೃತೀಯ ರಂಗದ ನಾಯಕರು: ಏನು ಮಾತುಕತೆ?

ಸಾರಾಂಶ

ಆಂಧ್ರ ಭವನದಲ್ಲಿ ತೃತೀಯ ರಂಗದ ನಾಯಕರ ಸಭೆ ಕುಮಾರಸ್ವಾಮಿ, ಪಿಣರಾಯಿ, ಚಂದ್ರಬಾಬು, ಮಮತಾ ಸಭೆ ಮುಂದಿನ ರಾಜಕೀಯ ನಡೆ ಕುರಿತು ಮಾತುಕತೆ?  

ನವದೆಹಲಿ(ಜೂ.16): ನಾಳೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನೀತಿ ಆಯೋಗದ ಸಭೆ ನಡೆಯಲಿದ್ದು, ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ರಾಷ್ಟ್ರ ರಾಜಧಾನಿ ನವದೆಹಲಿಗೆ ಬಂದಿಳಿದಿದ್ದಾರೆ. ಈ ಮಧ್ಯೆ ತೃತೀಯ ರಂಗದ ನಾಯಕರೆಲ್ಲಾ ಆಂಧ್ರ ಪ್ರದೇಶ ಭವನದಲ್ಲಿ ಸಭೆ ಸೇರಿರುವುದು ಭಾರೀ ಕುತೂಹಲ ಮೂಡಿಸಿದೆ.

ತೃತೀಯ ರಂಗದ ನಾಯಕರಾದ ಕರ್ನಾಟಕ ಸಿಎಂ ಕುಮಾರಸ್ವಾಮಿ, ಕೇರಳ ಸಿಎಂ ಪಿಣರಾಯಿ ವಿಜಯನ್, ಆಂದ್ರ ಸಿಎಂ ಚಂದ್ರಬಾಬು ನಾಯ್ಡು, ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ನಾಯಕರು ನವದೆಹಲಿಯಲ್ಲಿರುವ ಆಂಧ್ರ ಪ್ರದೇಶ ಭವನದಲ್ಲಿ ಸಭೆ ಸೇರಿ ಮಾತುಕತೆ ನಡೆಸಿದರು.

ಸದ್ಯ ಮಾತುಕತೆಯ ವಿವರ ಬಹಿರಂಗವಾಗಿಲ್ಲವಾದರೂ, ಮುಂದಿನ ರಾಜಕೀಯ ನಡೆ ಕುರಿತು ಈ ಎಲ್ಲ ನಾಯಕರು ಮಾತುಕತ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಾಳಿನ ನೀತಿ ಆಯೋಗದ ಸಭೆಯಲ್ಲಿ ಎಲ್ಲ ರಾಜ್ಯಗಳೂ ತಮ್ಮ ಬೇಡಿಕೆಗಳನ್ನು ಮಂಡಿಸಲಿದ್ದು, ಕೇಂದ್ರ ಸರ್ಕಾರ ಈ ಬೇಡಿಕೆಗಳಿಗೆ ಹೇಗೆ ಸ್ಪಂದಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ. ಆದರೆ ನಾಳಿನ ಸಭೆಗೂ ಮೊದಲೇ ತೃತೀಯ ರಂಗದ ನಾಯಕರೆಲ್ಲಾ ಒಂದೆಡೆ ಸೇರಿರುವುದು ಭಾರೀ ಮಹತ್ವ ಪಡೆದುಕೊಂಡಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸೀರಿಯಲ್‌ ನಟಿ ಅ*ತ್ಯಾಚಾರ ಮಾಡಿ ಬೆದರಿಸಿ ಮದುವೆ, ಈಗ ನಡುರಸ್ತೆಯಲ್ಲಿಯೇ ಅತ್ತೆ-ಮಾವನ ಮೇಲೆ ಹಲ್ಲೆ!
2 ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿಗೆ ಹೋಯ್ತು?, ವಿಪಕ್ಷಗಳ ಆಕ್ರೋಶಕ್ಕೆ ಹೆಬ್ಬಾಳ್ಕರ್ ಭಾವುಕ, ನಾನು ಮಹಿಳೆ ಎಂಬ ಕಾರಣಕ್ಕೆ ಹೀಗೆ ಮಾಡ್ತೀರಾ ಎಂದ ಸಚಿವೆ