
ನವದೆಹಲಿ: ನಾಲ್ಕು-ಚಕ್ರಗಳ ವಾಹನಗಳು ಮತ್ತು ದ್ವಿಚಕ್ರ ವಾಹನಗಳಿಗೆ ತೃತೀಯ ಪಕ್ಷಗಾರರ ವಿಮೆ ಕಡ್ಡಾಯಗೊಳಿಸಬೇಕು ಎಂದು ಸುಪ್ರೀಂ ಕೊರ್ಟ್ ಶುಕ್ರವಾರ ತಿಳಿಸಿದೆ.
ರಸ್ತೆ ಅಪಘಾತಗಳಲ್ಲಿ ಸಂತ್ರಸ್ತರಿಗೆ ಪರಿಹಾರ ನೀಡುವ ಸಲುವಾಗಿ ಇದನ್ನು ಮಾಡಬೇಕಾಗಿದೆ ಮತ್ತು ವಿಮಾ ಕಂಪೆನಿಗಳನ್ನು ಇದನ್ನು ಮಾನವೀಯ ನೆಲೆಯಲ್ಲಿ ನೋಡಬೇಕೇ ವಿನಹ ವಾಣಿಜ್ಯ ನೆಲೆಯಲ್ಲಿ ಅಲ್ಲ ಎಂದು ಕೋರ್ಟ್ ಹೇಳಿದೆ. ರಸ್ತೆ ಸುರಕ್ಷತೆಗೆ ಸಂಬಂಧಿಸಿದ ಸುಪ್ರೀಂ ಸಮಿತಿಯ ಶಿಫಾರಸುಗಳನ್ನು ಉಲ್ಲೇಖಿಸಿದ ಕೋರ್ಟ್ ಈ ನಿರ್ದೇಶನ ನೀಡಿದೆ.
ದೇಶದಲ್ಲಿರುವ ಸುಮಾರು 18 ಕೋಟಿ ವಾಹನಗಳಲ್ಲಿ ಆರು ಕೋಟಿ ವಾಹನಗಳು ಮಾತ್ರ ತೃತೀಯ ಪಕ್ಷಗಾರರ ವಿಮೆ ಹೊಂದಿವೆ ಎಂದು ಸಮಿತಿಯ ವರದಿಯಲ್ಲಿ ತಿಳಿಸಲಾಗಿದೆ. ಕೊಯಮತ್ತೂರು ಮೂಲದ ಸರ್ಜನ್ ಆರ್.ರಾಜಶೇ ಖರನ್ ಎಂಬವರು ಸಲ್ಲಿಸಿದ್ದ ಪಿಐಎಲ್ಗೆ ಸಂಬಂಧಿಸಿದ ವಿಚಾರಣೆಯ ವೇಳೆ ಕೋರ್ಟ್ ಈ ವಿಷಯ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.