
ಬೆಂಗಳೂರು: ಕಮಲಾನಗರದಲ್ಲಿರುವ ರಾಜಾಜಿನಗರ ಶಿಕ್ಷಣ ಸಂಸ್ಥೆಯ ಶ್ರೀ ಅರಬಿಂದೋ ವಿದ್ಯಾಮಂದಿರ ಶಾಲೆಯು ನರ್ಸರಿ ನಡೆಸುವ ಉದ್ದೇಶಕ್ಕಾಗಿ ಸರ್ಕಾರದಿಂದ ಜಾಗವನ್ನು ಪಡೆದು ಇದೀಗ ಪ್ರೈಮರಿ, ಹೈಸ್ಕೂಲ್ ನಡೆಸುತ್ತಿದೆ. ಸಂಸ್ಥೆ 1997 ಮಾರ್ಚ್ 20ರಂದು ಬಿಡಿಎದಿಂದ ಸಿಎ ನಿವೇಶನ ಗುತ್ತಿಗೆ ಪಡೆದಿತ್ತು. ನರ್ಸರಿ ನಡೆಸೋದು ಬಿಟ್ಟು ಅನಧಿಕೃತವಾಗಿ ಪ್ರೈಮರಿ ಹಾಗೂ ಹೈಸ್ಕೂಲ್ ನಡೆಸುತ್ತಿದ್ದು, ವಿದ್ಯಾರ್ಥಿಗಳಿಂದ ಹೆಚ್ಚುವರಿ ಹಣ ವಸೂಲಿ ಮಾಡುತ್ತಿದ್ದಾರೆನ್ನುವ ಆರೋಪ ಕೇಳಿ ಬಂದಿದೆ. ವರದಿ ಆಧರಿಸಿ ಬಿಡಿಎ ಆಯುಕ್ತರು 2017ರ ಏಪ್ರಿಲ್ 17ರಂದು ರಾಜಾಜಿನಗರ ಶಿಕ್ಷಣ ಸಂಸ್ಥೆ ನೀಡಿರುವ ಗುತ್ತಿಗೆಯನ್ನ ರದ್ದು ಮಾಡಿದ್ದಾರೆ. ಅಷ್ಟೇ ಅಲ್ಲದೇ ಒಂದು ವಾರದೊಳಗೆ ಗುತ್ತಿಗೆ ಕರಾರು ಮೂಲ ದಾಖಲಾತಿಗಳನ್ನು ಪ್ರಾಧಿಕಾರಕ್ಕೆ ಹಿಂತಿರುಗಿಸಬೇಕು. ಕಟ್ಟಡ ಖಾಲಿ ಮಾಡಿಕೊಡಬೇಕು ಎಂದು ಬಿಡಿಎ ಅಧಿಕಾರಿಗಳು ಆದೇಶಿಸಿದ್ದಾರೆ. ರಾಜಾಜಿನಗರ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ಮಾತ್ರ ಬಿಡಿಎ ಆದೇಶವನ್ನು ಪ್ರಶ್ನಿಸಿ ತಾವು ನ್ಯಾಯಾಲಯದ ಮೊರೆ ಹೋಗಿರುವುದಾಗಿ ಹೇಳುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.