
ಬೆಂಗಳೂರು (ಸೆ.06): ನಿನ್ನೆ ರಾತ್ರಿ ದುಷ್ಕರ್ಮಿಗಳ ಗುಂಡಿಗೆ ಬಳಿಯಾದ ಗೌರಿ ಲಂಕೇಶ್ ಸಾವಿಗೆ ಮಾಜಿ ಪತಿ ಚಿದಾನಂದ ರಾಜಘಟ್ಟ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
ಗೌರಿ ಲಂಕೇಶ್ ಹಾಗೂ ಪತ್ರಕರ್ತ ಚಿದಾನಂದ ರಾಜಘಟ್ಟ ಮದುವೆಗೂ ಮುನ್ನವೇ ಪರಿಚಿತರು. ಇಬ್ಬರೂ ಜತೆಯಲ್ಲೇ ಓದಿದವರು, ಜತೆಯಲ್ಲೇ ಕೆಲಸ ಮಾಡಿದವರು. ಕೊನೆಗೆ 1980 ರಲ್ಲಿ ವಿವಾಹವಾಗುತ್ತಾರೆ. ಒಂದಿಷ್ಟು ಕಾಲ ಒಟ್ಟಿಗೆ ಸಂಸಾರ ನಡೆಸುತ್ತಾರೆ. ಕಾಲಾನಂತರ ವಿಚ್ಚೇದನ ತೆಗೆದುಕೊಳ್ಳುತ್ತಾರೆ. ವಿಚ್ಛೇದನದ ಬಳಿಕವೂ ಚಿದಾನಂದ ರಾಜಘಟ್ಟ ಒಳ್ಳೆಯ ಸ್ನೇಹಿತನಾಗಿರುತ್ತಾರೆ.
ಚಿದಾನಂದ ರಾಜಘಟ್ಟ ಅಮೇರಿಕಾದಲ್ಲಿ ನೆಲೆಸಿದ್ದು ಟೈಮ್ಸ್ ಆಫ್ ಇಂಡಿಯಾದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.