ಕಾಂಗ್ರೆಸ್ ಮುಖಂಡರು ಬೆಚ್ಚಿ ಬೀಳುವ ವಿದ್ಯಮಾನ ನಡೆಯಲಿದೆ: ನಳಿನ್ ಕುಮಾರ್

Published : Apr 12, 2018, 11:35 AM ISTUpdated : Apr 14, 2018, 01:13 PM IST
ಕಾಂಗ್ರೆಸ್ ಮುಖಂಡರು ಬೆಚ್ಚಿ ಬೀಳುವ ವಿದ್ಯಮಾನ ನಡೆಯಲಿದೆ: ನಳಿನ್ ಕುಮಾರ್

ಸಾರಾಂಶ

ಕಾಂಗ್ರೆಸ್ ಮುಖಂಡ ರಮಾನಾಥ್ ರೈ ಅವರು ಬಿಜೆಪಿಗರು ಕಾಂಗ್ರೆಸ್ ಸೇರುತ್ತಾರೆ ಎಂದು ಕಾದು ಕುಳಿತುಕೊಳ್ಳಲಿ. ಬಿಜೆಪಿಯಲ್ಲಿ ಯಾವತ್ತೂ ಭಿನ್ನಾಭಿಪ್ರಾಯ ಸ್ಫೋಟ ಆಗುವುದಿಲ್ಲ ಎಂದು ಮಂಗಳೂರಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಮಂಗಳೂರು : ಕಾಂಗ್ರೆಸ್ ಮುಖಂಡ ರಮಾನಾಥ್ ರೈ ಅವರು ಬಿಜೆಪಿಗರು ಕಾಂಗ್ರೆಸ್ ಸೇರುತ್ತಾರೆ ಎಂದು ಕಾದು ಕುಳಿತುಕೊಳ್ಳಲಿ. ಬಿಜೆಪಿಯಲ್ಲಿ ಯಾವತ್ತೂ ಭಿನ್ನಾಭಿಪ್ರಾಯ ಸ್ಫೋಟ ಆಗುವುದಿಲ್ಲ ಎಂದು ಮಂಗಳೂರಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಟಿಕೆಟ್ ಆಕಾಂಕ್ಷಿಯಾಗಿದ್ದವನು ಕೊನೆ ತನಕ ಬಿಜೆಪಿಯಲ್ಲಿ ಹೋರಾಟ ಮಾಡುತ್ತಾನೆ. ಟಿಕೆಟ್ ಸಿಗದೇ ಇದ್ದಾಗ ಟಿಕೆಟ್ ಸಿಕ್ಕ ಅಭ್ಯರ್ಥಿಯನ್ನ ಬೆಂಬಲಿಸಿ ಕೆಲಸ ಮಾಡುತ್ತಾರೆ. ಕಾಂಗ್ರೆಸ್ ಪಟ್ಟಿ ಘೋಷಣೆ ಆದ ಮೇಲೆ ಅಲ್ಲಿನವರು ಕೆಲವರು ನಮ್ಮಲ್ಲಿಗೆ ಬರುತ್ತಾರೆ ಎಂದು ನಳಿನ್ ಕುಮಾರ್ ಹೇಳಿದ್ದಾರೆ.

ನಮ್ಮ ಪಕ್ಷದ ಬಾಗಿಲು ತಟ್ಟುವ ಕಾಂಗ್ರೆಸ್ ಮುಖಂಡರನ್ನ ನಾವು ಸೇರಿಸಿಕೊಳ್ಳುತ್ತೇವೆ.  ರಮಾನಾಥ್ ರೈಗೆ ಆಶ್ಚರ್ಯ ಆಗುವಷ್ಟು, ಸಿದ್ದರಾಮಯ್ಯರಿಗೆ ನಿದ್ದೆ ಬಾರದಷ್ಟು ದೊಡ್ಡ ಸುದ್ದಿ ದ.ಕ ಜಿಲ್ಲೆಯಲ್ಲಿ ಆಗುತ್ತದೆ ಎಂದು ಬಾಂಬ್ ಸಿಡಿಸಿದ್ದಾರೆ.

ನಮ್ಮ ಎಲ್ಲಾ ಕ್ಷೇತ್ರಗಳಿಗೆ ನಾವು ಕೊಟ್ಟ ಹೆಸರುಗಳ ಆಧಾರದಲ್ಲಿ ಮತ್ತೆ ಸಮೀಕ್ಷೆಯಾಗುತ್ತಿದೆ. ಜನಾಭಿಪ್ರಾಯದ ಮುಖೇನ ಗೆಲುವಿನ ಅಭ್ಯರ್ಥಿಗೆ ಟಿಕೆಟ್ ಕೊಡುವ ಕೆಲಸವಾಗುತ್ತಿದೆ. ನಾನು ಪಕ್ಷದ ಕಾರ್ಯಕರ್ತನಾಗಿದ್ದು, ನಾನು ಪಕ್ಷದ ಬೆಂಬಲಿಗ. ಹೀಗಾಗಿ ಯಾರ ಪರವೂ ಬ್ಯಾಟಿಂಗ್ ಮಾಡಲ್ಲ, ಯಾರ ಟಿಕೆಟ್ ಕೂಡ ತಡೆ ಹಿಡಿಯಲ್ಲ. ಈ ಬಗ್ಗೆ ಎದ್ದಿರುವ ಸಂಶಯ ಕೇವಲ ಊಹಾಪೋಹಗಳಷ್ಟೇ ಟಿಕೆಟ್ ಸಿಗದೇ ಇದ್ದಾಗ ಆಕ್ರೋಶಗೊಂಡು ಬೈಯ್ಯುವುದು ಸಹಜ.  ಆದರೆ ಬೈದರೂ ಮತ್ತೆ ನಾವು ಒಂದಾಗಿ ಕೆಲಸ ಮಾಡುತ್ತೇವೆ ಎಂದು ಅವರು ಹೇಳಿದರು.

ಇನ್ನು ರಮಾನಾಥ್ ರೈ, ಖಾದರ್, ಅಭಯರ ಬೆಂಬಲಿಗರು ಇದ್ದರೆ ನಾನು ಬಿಜೆಪಿಗೆ ತೆಗೆದುಕೊಳ್ಳುತ್ತೇನೆ. ಅಲ್ಲಿ ಅವರಿಗೆ ಟಿಕೆಟ್ ಕೊಡದೇ ಇದ್ದರೆ ನಮಲ್ಲಿಗೆ ಬಂದರೆ ನಾವು ಅವರನ್ನು ಸ್ವಾಗತಿಸುತ್ತೇವೆ, ಆದರೆ ಟಿಕೆಟ್ ನೀಡುವುದಿಲ್ಲ ಎಂದು ನಳಿನ್ ಕುಮಾರ್ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು
ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ