
ನವದೆಹಲಿ(ಜ.06): ಕೇಂದ್ರ ಸರ್ಕಾರ ಆಧಾರ್ ಗುರುತಿನ ಸಂಖ್ಯೆ ಕಡ್ಡಾಯಗೊಳಿಸಿದ ಪರಿಣಾಮವಾಗಿ ದೇಶದಲ್ಲಿ ಎರಡೆರಡು ಕಡೆ ಪೂರ್ಣಾವಧಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 80,000 ನಕಲಿ ಉಪಾಧ್ಯಾಯರನ್ನು ಪತ್ತೆ ಹಚ್ಚಲಾಗಿದೆ ಎಂದು ಕೇಂದ್ರ ಮಾನವ ಸಂಪನ್ಮೂಲಗಳ ಸಚಿವಾಲಯ ತಿಳಿಸಿದೆ. ಆದರೆ, ಈ ಪ್ರಕರಣದಲ್ಲಿ ಸಿಕ್ಕಿಬಿದ್ದವರಲ್ಲಿ ಯಾರೊಬ್ಬರೂ ಕೇಂದ್ರ ಸರ್ಕಾರದ ಅಧೀನದಡಿ ಬರುವ ವಿವಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರು ಇಲ್ಲ ಎಂದು ಎಚ್ಆರ್ಡಿ ಸಚಿವ ಪ್ರಕಾಶ್ ಜಾವಡೇಕರ್ ಸ್ಪಷ್ಟಪಡಿಸಿದ್ದಾರೆ.
ನಕಲಿ ವಿಧಾನಗಳನ್ನು ಅನುಸರಿಸುತ್ತಿದ್ದ ಉಪಾಧ್ಯಾಯರು ಬೇರೆ ಬೇರೆ ಶಿಕ್ಷಣ ಸಂಸ್ಥೆಗಳಲ್ಲಿ ಪೂರ್ಣಾವಧಿಯಲ್ಲಿ ಬೋಧನೆ ಮಾಡುತ್ತಿದ್ದರು. ಆದರೆ, ಕೇಂದ್ರ ಸರ್ಕಾರ ಜಾರಿಗೊಳಿಸಿದ ಆಧಾರ್ ಕಾರ್ಡ್ ಕ್ರಮದಿಂದಾಗಿ ಇಂಥ 80 ಸಾವಿರ ನಕಲಿ ಶಿಕ್ಷಕರನ್ನು ಪತ್ತೆಹಚ್ಚಲಾಗಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.