‘ಇದು ನನ್ನ ಕೊನೆ ದಸರಾ, ಕೊನೆ ಸುದ್ದಿಗೋಷ್ಠಿ’

Published : Sep 19, 2017, 02:35 PM ISTUpdated : Apr 11, 2018, 01:10 PM IST
‘ಇದು ನನ್ನ ಕೊನೆ ದಸರಾ, ಕೊನೆ ಸುದ್ದಿಗೋಷ್ಠಿ’

ಸಾರಾಂಶ

‘ಮುಂದಿನ ನವರಾತ್ರಿ, ದಸರಾ ಉತ್ಸವವನ್ನು ನಾನು ನೋಡುತ್ತೇನೋ ಇಲ್ಲವೊ ಗೊತ್ತಿಲ್ಲ. ಬಹುಶಃ ಈ ಬಾರಿಯ ದಸರಾ ನನ್ನ ಕೊನೆಯ ಆಚರಣೆ ಆದರೂ ಅಚ್ಚರಿ ಇಲ್ಲ. ಇದು ನನ್ನ ಕೊನೇ ಸುದ್ದಿಗೋಷ್ಠಿ ಇದ್ದರೂ ಇರಬಹುದು’ – ಹೀಗೆ ವಿಷಾದಭರಿತ ಮಾತುಗಳನ್ನಾಡಿದವರು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ.

ಮಂಗಳೂರು: ‘ಮುಂದಿನ ನವರಾತ್ರಿ, ದಸರಾ ಉತ್ಸವವನ್ನು ನಾನು ನೋಡುತ್ತೇನೋ ಇಲ್ಲವೊ ಗೊತ್ತಿಲ್ಲ. ಬಹುಶಃ ಈ ಬಾರಿಯ ದಸರಾ ನನ್ನ ಕೊನೆಯ ಆಚರಣೆ ಆದರೂ ಅಚ್ಚರಿ ಇಲ್ಲ. ಇದು ನನ್ನ ಕೊನೇ ಸುದ್ದಿಗೋಷ್ಠಿ ಇದ್ದರೂ ಇರಬಹುದು’ – ಹೀಗೆ ವಿಷಾದಭರಿತ ಮಾತುಗಳನ್ನಾಡಿದವರು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ.

ಮಂಗಳೂರಿನ ಕುದ್ರೋಳಿ ಕ್ಷೇತ್ರದಲ್ಲಿ ದಸರಾ ಆಚರಣೆ ಕುರಿತು ಸೋಮವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ತುಂಬಾ ದಣಿದವರಂತೆ ಕಂಡುಬಂದರೂ ಎಂದಿನ ಲವಲವಿಕೆಯನ್ನು ತೋರ್ಪಡಿಸುತ್ತಾ ಮಾತನಾಡಿದ ಅವರು, ಕೊನೆಗೆ ಮೌನಕ್ಕೆ ಜಾರಿದರು.

ಸುದ್ದಿಗೋಷ್ಠಿಯಲ್ಲಿ ದಸರಾ ವಿಚಾರ ಬಿಟ್ಟು ರಾಜಕೀಯವನ್ನು ಪೂಜಾರಿ ಮಾತನಾಡಲಿಲ್ಲ. ಅನಾರೋಗ್ಯದಿಂದ ಬಳಲುತ್ತಿರುವ ಜನಾರ್ದನ ಪೂಜಾರಿ ಅವರು ಬಂಟ್ವಾಳದ ನಿವಾಸದಲ್ಲಿ ಆಯುರ್ವೇದ ಚಿಕಿತ್ಸೆ ಪಡೆಯುತ್ತಿದ್ದಾರೆ. ತಮ್ಮ ಆತ್ಮಚರಿತ್ರೆಯನ್ನೂ ಬರೆಯುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?