
ನವದೆಹಲಿ: ಮಾರ್ಚ್’ನಿಂದ ಮೇ ತಿಂಗಳ ಅವಧಿಯಲ್ಲಿ ಉತ್ತರ ಭಾರತದೆಲ್ಲೆಡೆ ತಾಪಮಾನ ಸಾಮಾನ್ಯಕ್ಕಿಂತ 1 ಡಿಗ್ರಿ ಸೆಲ್ಸಿಯಸ್ ಅಧಿಕವಾಗಿರಲಿದ್ದು, ಉರಿ ಬಿಸಿಲಿಗೆ ತುತ್ತಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ದೆಹಲಿ ಹಾಗೂ ಸುತ್ತಮುತ್ತಲಿನ ರಾಜ್ಯಗಳಾದ ಹರ್ಯಾಣ, ಪಂಜಾಬ್ ಮತ್ತು ರಾಜಸ್ಥಾನಗಳಲ್ಲಿ ಸಾಮಾನ್ಯಕ್ಕಿಂತ 1.5 ಡಿಗ್ರಿ ಅಧಿಕ ತಾಪಮಾನ ಕಂಡು ಬರಲಿದೆ. ಹಿಮಾಲಯದ ತಪ್ಪಲು ಪ್ರದೇಶಗಳಾದ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡಗಳಲ್ಲಿ ಸಾಮಾನ್ಯಕ್ಕಿಂತ ತಾಪಮಾನ 2.3 ಡಿಗ್ರಿಯಷ್ಟುಏರಿಕೆಯಾಗುವ ಸಾಧ್ಯತೆಯಿದೆ.
ಇನ್ನು ದಕ್ಷಿಣ ಭಾರತ ಮತ್ತು ಈಶಾನ್ಯ ರಾಜ್ಯಗಳಲ್ಲಿ ತಾಪಮಾನ ಎಂದಿನಂತೆ ಇರಲಿದೆ. ಸಾಮಾನ್ಯವಾಗಿ ಮಾಚ್ರ್ನಿಂದ ಜೂಲೈ ಅವಧಿಯಲ್ಲಿ ಭಾರತದಲ್ಲಿ ಬಿಸಿಲಿನ ತೀವ್ರತೆ ಅಧಿಕವಾಗಿರುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.