
ಕುಡಿಯೋದಿಕ್ಕೆ ದುಡ್ಡಿಲ್ಲ ಅಂತ ಕಳ್ಳತನ ಮಾಡೋಕೆ ಬಂದಿದ್ದ ಖದೀಮರು ಸಿಕ್ಕಿಬಿದ್ದಿರುವ ಘಟನೆ ಬೆಂಗಳೂರಿನ ಶಿವಾಜಿನಗರದಲ್ಲಿ ನಡೆದಿದೆ. ಮೂವರು ಕಳ್ಳರು ರಮಣ ಹೋಟೆಲ್ ಬಳಿ ಇದ್ದ ಹಳೇ ಕಟ್ಟಡವೊಂದಕ್ಕೆ ಕಬ್ಬಿಣದ ವಸ್ತುಗಳನ್ನು ಕದಿಯಲು ನುಗ್ಗಿದ್ದರು. ಈ ವೇಳೆ ವಿಷಯ ತಿಳಿದ ಸಾರ್ವಜನಿಕರು, ಕಳ್ಳರನ್ನು ಹಿಡಿದು ಕೂಡಿ ಹಾಕಿದ್ದಾರೆ. ಮತ್ತು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ವೇಳೆ ಸತ್ಯ ಬಾಯ್ಬಿಟ್ಟ ಖದೀಮರು, ಕುಡಿಯಲು ಹಣವಿಲ್ಲ ಕಾರಣ ಕಳ್ಳತನಕ್ಕೆ ಬಂದಿದ್ದಾಗಿ ಒಪ್ಪಿಕೊಂಡಿದ್ದಾರೆ. ಬಂಧಿತರನ್ನು ಮಣಿಪುರ ಹಾಗೂ ತಮಿಳುನಾಡು ಮೂಲದವರು ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.