
ನವದೆಹಲಿ (ಅ.06): ಸರ್ಜಿಕಲ್ ದಾಳಿಯು ಚರ್ಚಿತ ವಿಷಯವಾಗಿದ್ದು ದಾಳಿ ನಡೆದಿದೆ ಎನ್ನುವುದಕ್ಕೆ ಸಾಕ್ಷಿ ಕೊಡಿ ಎನ್ನುವವರಿಗೆ ರಕ್ಷಣಾ ಸಚಿವ ಮನೋಹರ್ ಪರ್ರಿಕರ್ ತಿರುಗೇಟು ನೀಡಿದ್ದಾರೆ.
ನಮ್ಮ ಸೈನಿಕರ ಸಾಹಸದ ಬಗ್ಗೆ ಅನುಮಾನ ಬೇಡ. ಸೈನ್ಯದ ಕಾರ್ಯಾಚರಣೆ ಬಗ್ಗೆ ಪುರಾವೆಯನ್ನು ನೀಡಿ ತೊಂದರೆ ಕೊಡಲು ಸರ್ಕಾರ ಮುಂದಾಗುವುದಿಲ್ಲ ಎಂದು ಪರ್ರಿಕರ್ ಸ್ಪಷ್ಟಪಡಿಸಿದ್ದಾರೆ.
ನಮ್ಮ ಸೈನ್ಯದ ಶೌರ್ಯದ ಬಗ್ಗೆ ಯಾರಿಗೂ ಅನುಮಾನವಿಲ್ಲ. ಇತ್ತೀಚಿಗೆ ಕೆಲವರು ನಮ್ಮ ಸೇನೆ ಕುರಿತು ಅನುಮಾನ ವ್ಯಕ್ತಪಡಿಸಿದ್ದಾರೆ. ನಮ್ಮ ದೇಶಕ್ಕೆ ನಿಷ್ಠರಾಗಿಲ್ಲದ ಕೆಲವರಿಗೆ ಭಾರತೀಯ ಸೇನೆಯನ್ನು ವಿಮರ್ಶಿಸುವುದೇ ಕೆಲಸವಾಗಿದೆ. ಅಂತವರಿಗೆ ನಾವು ಸರ್ಜಿಕಲ್ ದಾಳಿಯ ಬಗ್ಗೆ ಯಾವುದೇ ಪುರಾವೆ ನೀಡುವುದಿಲ್ಲ ಎಂದು ಪರ್ರಿಕರ್ ಖಡಕ್ಕಾಗಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.