
ನವದೆಹಲಿ: ಮತ ಹಾಕದವರಿಗೆ ಸರ್ಕಾರ ಪ್ರಶ್ನಿಸುವ ಅಥವಾ ದೂಷಿಸುವ ಹಕ್ಕಿರುವುದಿಲ್ಲ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.
ಒತ್ತುವರಿ ತೆರವಿಗೆ ದೇಶಾದ್ಯಂತ ಅನ್ವಯವಾಗುವಂತಹ ಆದೇಶ ಹೊರಡಿಸಬೇಕು ಎಂದು ಕೋರಿ ‘ವಾಯ್ಸ್ ಆಫ್ ಇಂಡಿಯಾ' ಎಂಬ ಎನ್ಜಿಒದ ಧನೇಶ್ ಲೆಶ್ಧನ್ ಎಂಬುವರು ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆ ವೇಳೆ ಸ್ವತ ವಾದ ಮಂಡಿಸಿದ ಧನೇರ್ಶ, ಸರ್ಕಾರಗಳು ಒತ್ತುವರಿ ತೆರ ವಿಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿ ದರು. ಈ ವೇಳೆ ‘ನೀವು ಮತದಾನ ಮಾಡಿದ್ದೀರೋ? ಇಲ್ಲವೋ?' ಎಂದು ಸಿಜೈ ಜೆ.ಎಸ್. ಖೇಹರ್ ನೇತೃತ್ವದ ಪೀಠ ಪ್ರಶ್ನಿಸಿತು.
ಆಗ ‘ಸತ್ಯ ಹೇಳುತ್ತೇನೆ. ಜೀವನದಲ್ಲಿ ಎಂದಿಗೂ ಮತದಾನ ಮಾಡಿದವ ನಾನಲ್ಲ' ಎಂದು ಧನೇಶ್ ಹೇಳಿದಾಗ ನ್ಯಾಯಪೀಠ ಅಸಮಾಧಾನಗೊಂಡಿತು.ಜೊತೆಗೆ ಮತ ಹಾಕದವರೆಗೆ ಸರ್ಕಾರವನ್ನು ಪ್ರಶ್ನಿಸುವ ಅಥವಾ ದೂಷಿಸುವ ಹಕ್ಕಿರುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.