ಭಾರತ ಮಾತಾ ಕೀ ಜೈ ಎನ್ನದವರು ಪಾಕಿಸ್ತಾನಿಗಳು: ಬಿಜೆಪಿ ಶಾಸಕ

Published : Feb 27, 2018, 09:19 AM ISTUpdated : Apr 11, 2018, 12:38 PM IST
ಭಾರತ ಮಾತಾ ಕೀ ಜೈ ಎನ್ನದವರು ಪಾಕಿಸ್ತಾನಿಗಳು: ಬಿಜೆಪಿ ಶಾಸಕ

ಸಾರಾಂಶ

ಭಾರತ ಮಾತಾ ಕೀ ಜೈ’ ಎಂದು ಹೇಳಲು ನಿರಾಕರಿಸಿದವರು ಪಾಕಿಸ್ತಾನಿಗಳು ಎಂದು ಹೇಳುವ ಮೂಲಕ ಉತ್ತರ ಪ್ರದೇಶ ಬಿಜೆಪಿ ಶಾಸಕ ಸುರೇಂದ್ರ ಸಿಂಗ್‌ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬಲಿಯಾ: ‘ಭಾರತ ಮಾತಾ ಕೀ ಜೈ’ ಎಂದು ಹೇಳಲು ನಿರಾಕರಿಸಿದವರು ಪಾಕಿಸ್ತಾನಿಗಳು ಎಂದು ಹೇಳುವ ಮೂಲಕ ಉತ್ತರ ಪ್ರದೇಶ ಬಿಜೆಪಿ ಶಾಸಕ ಸುರೇಂದ್ರ ಸಿಂಗ್‌ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶಾಸಕ ಸುರೇಂದ್ರ ಸಿಂಗ್‌ ‘ಯಾರು ‘ಭಾರತ ಮಾತಾ ಕೀ ಜೈ’ ‘ವಂದೇ ಮಾತರಂ’ ಎಂದು ಹೇಳಲು ನಿರಾಕರಿಸುತ್ತಾರೋ ಅವರು ಪಾಕಿಸ್ತಾನಿಗಳು. ಅವರಿಗೆ ಭಾರತದಲ್ಲಿ ನೆಲೆಸುವ ಹಕ್ಕಿಲ್ಲ. ಯಾರು ಮಾತೃಭೂಮಿಗೆ ಗೌರವ ನೀಡುವುದಿಲ್ಲವೋ, ಅವರ ದೇಶಪ್ರೇಮವೂ ಸಂದೇಹಾತ್ಮಕವಾದುದು’ ಎಂದಿದ್ದಾರೆ. 

ಕಳೆದ ತಿಂಗಳು 2024ರೊಳಗೆ ಭಾರತ ಹಿಂದುಗಳ ದೇಶವಾಗುತ್ತದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ
ವೃದ್ಧೆಯ ಕೇರ್ ಟೇಕರ್‌ನಿಂದಲೇ ₹31 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಬಿಹಾರ ಮೂಲದ ಚಾಂದಿನಿ ಬಂಧನ!