
ಹುಬ್ಬಳ್ಳಿ(ನ.08): ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದಲ್ಲಿ ಸಕ್ರಿಯರಾಗಿರುವ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿಯವರಿಗೆ ಅನಾಮಧೇಯ ವ್ಯಕ್ತಿಯಿಂದ ಜೀವ ಬೆದರಿಕೆ ಪತ್ರ ಬಂದಿದೆ.
ಹೊರಟ್ಟಿ ಅವರ ಕಚೇರಿಗೆ ಸೋಮವಾರ ಈ ಜೀವ ಬೆದರಿಕೆ ಪತ್ರ ಬಂದಿದ್ದು, ಕಚೇರಿ ಸಿಬ್ಬಂದಿ ಜೀವ ಬೆದರಿಕೆ ಪತ್ರವನ್ನು ಡಿಸಿಪಿ ಮಲ್ಲಿಕಾರ್ಜುನ ನ್ಯಾಮ ಗೌಡರ್ ಅವರಿಗೆ ಹಸ್ತಾಂತರಿಸಿದ್ದಾರೆ. ಪತ್ರದಲ್ಲಿ ‘ಹೊರಟ್ಟಿ ಅವರೇ ನಿಮ್ಮನ್ನು ಕೊಲ್ಲಲು ಮುಂಬೈನಿಂದ ಐವರ ತಂಡ ಹುಬ್ಬಳ್ಳಿಗೆ ಬಂದಿಳಿ ದಿದ್ದು, ಗುಂಡಿಕ್ಕಿ ಹತ್ಯೆ ಮಾಡಲಾ ಗುವುದು. ಎಚ್ಚರದಿಂದ ಇರಿ’ ಎಂದು ಬೆದರಿಕೆ ಹಾಕಲಾಗಿದೆ.
ಹೊರಟ್ಟಿಯವರ ಕಚೇರಿ ಸಿಬ್ಬಂದಿ ಪ್ರಕಾರ ಸೋಮವಾರ ಮಧ್ಯಾಹ್ನ 12.30ಕ್ಕೆ ಅಂಚೆ ಮೂಲಕ ಈ ಪತ್ರ ಬಂದಿದೆ. ಹುಬ್ಬಳ್ಳಿಯ ಉಣಕಲ್ಲ ಅಂಚೆ ಕಚೇರಿಯಿಂದ ಪೋಸ್ಟ್ ಮಾಡಿದ್ದು, ಕನ್ನಡ ಭಾಷೆಯಲ್ಲೇ ಬರೆಯಲಾಗಿದೆ. ಈ ಬಗ್ಗೆ ಬಸವರಾಜ ಹೊರಟ್ಟಿ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ, ಲಭ್ಯವಾಗಿಲ್ಲ. ಆದರೆ, ಪೊಲೀಸ್ ಆಯುಕ್ತ ಎಂ.ಎನ್. ನಾಗರಾಜ್ ಬೆದರಿಕೆ ಪತ್ರ ಬಂದಿರುವುದನ್ನು ಖಚಿತಪಡಿಸಿದ್ದು, ತನಿಖೆ ಕೈಗೊಂಡಿದ್ದಾರೆ. ಆದರೆ, ಯಾವ ಕಾರಣಕ್ಕೆ ಪತ್ರ ಬರೆಯಲಾಗಿದೆ ಎನ್ನುವುದು ಖಚಿತವಾಗಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.