
ಬೆಂಗಳೂರು(ಸೆ.19): ಯಶವಂತಪುರ ಸಮೀಪ ಗೋವರ್ಧನ್ ಚಿತ್ರಮಂದಿರದ ಬಸ್ ನಿಲ್ದಾಣದಲ್ಲಿ ವಿದೇಶಿ ಸಿಗರೆಟ್ ಮಾರಾಟಕ್ಕೆ ಯತ್ನಿಸಿದ್ದ ಮೂವರನ್ನು ಆರ್ಎಂಸಿ ಯಾರ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅರಸಿಕೆರೆ ತಾಲೂಕಿನ ಅಮ್ಜದ್ ಪಾಷಾ, ಯಶವಂತಪುರದ ಸತೀಶ್ ಕುಮಾರ್, ಮೈಸೂರಿನ ಜಯಂತಿಲಾಲ್ ಬಂಧಿತರಾಗಿದ್ದು, ಆರೋಪಿಗಳಿಂದ 5 ಲಕ್ಷ ಮೌಲ್ಯದ 124 ಬಂಡಲ್ ಗೋಲ್ಡ್ ಫ್ಲೇಕ್ ಸಿಗರೆಟ್ ಜಪ್ತಿ ಮಾಡಲಾಗಿದೆ. ಗೋಲ್ಡ್ ಫ್ಲೇಕ್ ಪ್ಯಾಕ್ನಲ್ಲಿ ವಿದೇಶಿ ಸಿಗರೆಟ್ ಇಟ್ಟು ಮಾರಾಟ ಮಾಡುತ್ತಿದ್ದರು. ಮೂರು ದಿನಗಳ ಹಿಂದೆ ಬ್ಯಾಗ್ನಲ್ಲಿ ತುಂಬಿಕೊಂಡು ಅಕ್ರಮವಾಗಿ ಸಿಗರೆಟ್ ಮಾರಾಟಕ್ಕೆ ಆರೋಪಿಗಳು ಯತ್ನಿಸಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಯಿತು. ಅದರಂತೆ ದಾಳಿ ನಡೆಸಿದಾಗ ಮಾಲಿನ ಸಮೇತ ಅವರು ಸಿಕ್ಕಿಬಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ತಮಿಳುನಾಡಿನ ಮುಬಾರಕ್ ಎಂಬುವರಿಂದ ಸಿಗರೆಟ್ ಖರೀದಿಸಿದ್ದ ಈ ಮೂವರು, ನಗರದಲ್ಲಿ ಅವುಗಳನ್ನು ಮಾರಾಟಕ್ಕೆ ಮುಂದಾಗಿದ್ದರು. ಈ ಸಿಗರೆಟ್ ಪ್ಯಾಕ್ಗಳ ಮೇಲೆ ಆರೋಗ್ಯಕ್ಕೆ ಹಾನಿಕರ ಎಂಬ ಲೇಬಲ್ ಇಲ್ಲದ ಕಾರಣ 2003ರ ತಂಬಾಕು ಉತ್ಪನ್ನ ಕಾಯ್ಡೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.