
ಬೆಂಗಳೂರು(ಡಿ.10) ಇಂದಿನಿಂದ ಸತತ 3 ದಿನಗಳ ಕಾಲ ಬ್ಯಾಂಕುಗಳಿಗೆ ರಜೆ ಇರುವ ಕಾರಣ ನಗದು ಸಮಸ್ಯೆ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ.
ದೇಶಾದ್ಯಂತ ಬಹುತೇಕ ಎಟಿಎಂಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ, ಕೆಲವದರಲ್ಲಿ ಹಣವಿಲ್ಲ, ಇನ್ನು ಕೆಲವು ಮುಚ್ಚಿವೆ. ಹೀಗಿರುವಾಗ, ಹೆಚ್ಚಿನವರು ನಗದಿಗಾಗಿ ಬ್ಯಾಂಕುಗಳನ್ನೇ ಅವಲಂಬಿಸಿದ್ದಾರೆ.
ಇಂದು ಎರಡನೇ ಶನಿವಾರ(ಡಿ.10), ಭಾನುವಾರ(ಡಿ.11) ಮತ್ತು ಈದ್ ಮಿಲಾದ್(ಡಿ.12)ಗಳು ಸರತಿಯಲ್ಲಿ ಬಂದಿರುವ ಕಾರಣ ಸತತ 3 ದಿನಗಳ ಕಾಲ ಬ್ಯಾಂಕುಗಳು ಕಾರ್ಯನಿರ್ವಹಿಸುವುದಿಲ್ಲ.
ಈಗಾಗಲೇ ಕ್ಯೂಗಳಲ್ಲಿ ನಿಂತು ಸಹನೆ ಕಳೆದುಕೊಂಡಿರುವ ಜನರಿಗೆ ಈ ಮೂರು ದಿನಗಳು ಇನ್ನಷ್ಟು ಸಮಸ್ಯೆ ಉಂಟುಮಾಡುವ ಸಾಧ್ಯತೆಯಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.