
ಬೆಂಗಳೂರು: ಮೂವರಿಗೆ ಚಾಕು ಇರಿದು ದರೋಡೆ ಮಾಡಿರುವ ಘಟನೆ ನಗರದ ಹೊರವಲಯ ಅವಲಹಳ್ಳಿಯಲ್ಲಿ ನಡೆದಿದೆ. ಅವಲಹಳ್ಳಿ ಹಾಗೂ ಹಿರಂಡಹಳ್ಳಿ ರಸ್ತೆಯ ಗ್ಲಾಸ್ ಪ್ಯಾಕ್ಟರಿ ಬಳಿ ದರೋಡೆ ದುಷ್ಕೃತ್ಯ ಸಂಭವಿದೆ. ರಸ್ತೆಯಲ್ಲಿ ನಡೆದು ಬರುತ್ತಿದ್ದ ಅವಲಹಳ್ಳಿ ನಿವಾಸಿ ನವೀನ್(23) ಹಾಗೂ ಆಂಧ್ರ ಮೂಲದ ಕೂಲಿ ಕಾರ್ಮಿಕರಾದ ಬಾಬು(26) ಹಾಗೂ ನರೇಂದ್ರ(24) ಎಂಬುವರಿಗೆ ಚಾಕುವಿನಿಂದ ಇರಿದು ಮೊಬೈಲ್, ಪರ್ಸ್ ದೋಚಿ ದ್ವಿಚಕ್ರ ವಾಹನದಲ್ಲಿ ಇಬ್ಬರು ದರೋಡೆಕೋರರು ಪರಾರಿಯಾಗಿದ್ದಾರೆ. ಚಾಕು ಇರಿತಕ್ಕೆ ಒಳಗಾದ ಮೂವರನ್ನು ಮಣಿಪಾಲ್ ಮತ್ತು ವಿಕ್ಟೋರಿಯಾ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ. ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದರೋಡೆಕೋರರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.