
ಮನೆಯಲ್ಲಿ ಅತ್ತೆ ಸೊಸೆಯರ ಜಗಳ ಸಾಮಾನ್ಯ. ಆದರೆ, ಗುಜರಾತ್ ಚುನಾವಣೆಯಲ್ಲಿ ಕಾಲೋಲ್ ವಿಧಾನಸಭಾ ಕ್ಷೇತ್ರದಿಂದ ಅತ್ತೆಯ ಬದಲು ಸೊಸೆಗೆ ಟಿಕೆಟ್ ನೀಡಿರುವುದು ಮಾವನ ಕೋಪಕ್ಕೆ ಕಾರಣವಾಗಿದೆ.
ಚುನಾವಣೆಯಲ್ಲಿ ಪತ್ನಿಯ ಬದಲು ಸೊಸೆಗೆ ಟಿಕೆಟ್ ನೀಡಿದ್ದಕ್ಕೆ ಅಸಮಾಧಾನಗೊಂಡಿರುವ ಬಿಜೆಪಿ ಸಂಸದ ಪ್ರಭಾತ್ ಸಿಂಗ್ ಚೌಹಾಣ್, ಬಿಜೆಪಿ ಗೆಲ್ಲುವ ಬಗ್ಗೆ ಯಾವುದೇ ಭರವಸೆ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಗುಜರಾತ್ ಎರಡನೇ ಹಂತದ ಚುನಾವಣೆಗೆ ಬಿಜೆಪಿ 13 ಅಭ್ಯರ್ಥಿಗಳ ಪಟ್ಟಿಯನ್ನು ಶುಕ್ರವಾರ ಪ್ರಕಟಿಸಿದ್ದು, ಹಾಲಿ ಶಾಸಕ ಅರವಿಂದ್ ಸಿಂಗ್ ಚೌಹಾಣ್’ಗೆ ಟಿಕೆಟ್ ನಿರಾಕರಿಸಿ, ಪ್ರಭಾತ್ಸಿಂಗ್ ಚೌಹಾಣ್ ಅವರ ಸೊಸೆಗೆ ಟಿಕೆಟ್ ನೀಡಲಾಗಿದೆ.
ಆದರೆ, ಇದು ಕುಟುಂಬದಲ್ಲೇ ಭಿನ್ನಾಭಿಪ್ರಾಯ ಸೃಷ್ಟಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.