ಯಡಿಯೂರಪ್ಪ ತವರು ಜಿಲ್ಲೆಯಲ್ಲಿ ಅವರ ಶಿಷ್ಯಂದಿರ ನಡುವೆ ಆರಂಭವಾಗಿದೆ ಟಿಕೆಟ್ ವಾರ್..

Published : Mar 02, 2018, 02:53 PM ISTUpdated : Apr 11, 2018, 12:53 PM IST
ಯಡಿಯೂರಪ್ಪ ತವರು ಜಿಲ್ಲೆಯಲ್ಲಿ ಅವರ ಶಿಷ್ಯಂದಿರ ನಡುವೆ ಆರಂಭವಾಗಿದೆ ಟಿಕೆಟ್ ವಾರ್..

ಸಾರಾಂಶ

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತವರು ಜಿಲ್ಲೆಯಲ್ಲಿ ಟಿಕೆಟ್’ಗಾಗಿ ವಾರ್ ಆರಂಭವಾಗಿದೆ. ಸಾಗರ - ಹೊಸನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್’ಗಾಗಿ ಯಡಿಯೂರಪ್ಪನವರ ಶಿಷ್ಯರ ನಡುವೆ ಪೈಪೋಟಿ ಆರಂಭವಾಗಿದೆ.

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತವರು ಜಿಲ್ಲೆಯಲ್ಲಿ ಟಿಕೆಟ್’ಗಾಗಿ ವಾರ್ ಆರಂಭವಾಗಿದೆ. ಸಾಗರ - ಹೊಸನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್’ಗಾಗಿ ಯಡಿಯೂರಪ್ಪನವರ ಶಿಷ್ಯರ ನಡುವೆ ಪೈಪೋಟಿ ಆರಂಭವಾಗಿದೆ.

ಸಾಗರ ಕ್ಷೇತ್ರದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮತ್ತು ಹೊಸನಗರ ಕ್ಷೇತ್ರದ ಮಾಜಿ ಶಾಸಕ ಹಾಲಪ್ಪ ನಡುವೆ ವಾರ್  ನಡೆಯುತ್ತಿದೆ. ಇತ್ತೀಚೆಗೆ  ಯಡಿಯೂರಪ್ಪ ಮಾಧ್ಯಮಗಳಿಗೆ ಹೇಳಿಕೆ ನೀಡಿ ಸೊರಬಕ್ಕೆ ಕುಮಾರ್ ಬಂಗಾರಪ್ಪ, ಸಾಗರಕ್ಕೆ ಹಾಲಪ್ಪ ಸ್ಪರ್ಧೆ ಮಾಡಲಿದ್ದು, ಗೋಪಾಲಕೃಷ್ಣಗೆ ಸೂಕ್ತ ಸ್ತಾನ ಮಾನ ನೀಡುವುದಾಗು ಹೇಳಿದ್ದರು.

ಈ ಹಿನ್ನೆಲೆಯಲ್ಲಿ  ಶಿವಮೊಗ್ಗದ ಬಿಜೆಪಿ ಕಚೇರಿಗೆ ಬೇಳೂರು ಗೋಪಾಲ ಕೃಷ್ಣ ಬೆಂಬಲಿಗರ ನಿಯೋಗ ತೆರಳಿ ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ನೀಡುವಂತೆ ಕೇಳಿದೆ. ಜಿಲ್ಲಾ ಕಚೇರಿಯಲ್ಲಿ ಆಯನೂರು ಮಂಜುನಾಥ್ ಹಾಗೂ ರಾಜ್ಯ ಕಾರ್ಯದರ್ಶಿ ದತ್ತಾತ್ರಿಯವರನ್ನು ಭೇಟಿ ಮಾಡಿದೆ. ಅಲ್ಲದೇ  ಗೋಪಾಲಕೃಷ್ಣ  ಅವರಿಗೆ ಟಿಕೆಟ್ ನೀಡಿದಲ್ಲಿ ಅವರನ್ನು ಗೆಲ್ಲಿಸುವುದು ಖಚಿತ ಎಂದು ಈ ವೇಳೆ ಹೇಳಿದ್ದಾರೆ.

ಈ ವೇಳೆ ಮಾತನಾಡಿದ ಆಯನೂರು ಮಂಜುನಾಥ್ ಸರ್ವೆ ಮೂಲಕ  ಅಭ್ಯರ್ಥಿಗಳ ಆಯ್ಕೆನಡೆಯುತ್ತದೆ. ಅಲ್ಲಿಯವರೆಗೂ ತಾಳ್ಮೆಯಿಂದ  ಇರುವಂತೆ ತಿಳಿಸಿದ್ದಾರೆ. ಈ ವಿಚಾರವನ್ನು ರಾಜ್ಯಾಧ್ಯಕ್ಷ ಮುಂದೆ ಇಡುವುದಾಗಿಯೂ ಕೂಡ ಅವರು ಭರವಸೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಾವಣಗೆರೆಯನ್ನು ಎತ್ತರಕ್ಕೇರಿಸಿದ ವಾಮನಮೂರ್ತಿ: ಸಾವಿರಾರು ಮಂದಿಗೆ ಉದ್ಯೋಗ ಕೊಟ್ಟ ಶಾಮನೂರು
62 ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಡೆಸಿ ಗೆದ್ದ 82ರ ವೃದ್ಧ