ಗಣರಾಜ್ಯೋತ್ಸವ ಆಚರಣೆ : ಮಾಣಿಕ್ ಷಾ ಪರೇಡ್ ಸುತ್ತ ಬಿಗಿ ಭದ್ರತೆ

Published : Jan 24, 2017, 02:06 AM ISTUpdated : Apr 11, 2018, 12:45 PM IST
ಗಣರಾಜ್ಯೋತ್ಸವ ಆಚರಣೆ : ಮಾಣಿಕ್ ಷಾ ಪರೇಡ್ ಸುತ್ತ ಬಿಗಿ ಭದ್ರತೆ

ಸಾರಾಂಶ

ನಗರದಾದ್ಯಂತ ಒಟ್ಟು 9422 ಪೊಲೀಸ್ ಸಿಬ್ಬಂದಿಗಳ ನಿಯೋಜಿಸಲಾಗಿದ್ದು, ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಿನ ಭದ್ರತೆ ನೀಡಲಾಗಿದೆ. ಈ ಬಾರಿ ನೀರಿನ ಬಾಟಲಿ, ಶಸ್ತ್ರಾಸ್ತಗಳನ್ನು ಒಳ ತರಲು ನಿಷೇಧಿಸಲಾಗಿದೆ

ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿದ್ಧತೆ ಭರದಿಂದ ಸಾಗಿದೆ. ಭದ್ರತೆ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಲಾಗಿದ್ದು, ಮೈದಾನಕ್ಕೆ ಸೂಕ್ತ ಬಂದೋಬಸ್ತ್ ಕಲ್ಪಿಸಲಾಗಿದೆ. ಮೈದಾನದಲ್ಲಿ 50 ಸಿಸಿ ಕ್ಯಾಮರಾ, ವ್ಯವಸ್ಥಿತ ಸಂಚಾರ ನಿಯಂತ್ರಣ ವ್ಯವಸ್ಥೆ ಮಾಡಲಾಗಿದೆ. ತುರ್ತು ಸಂದರ್ಭದಲ್ಲಿ ಅಗತ್ಯವಿರುವಷ್ಟು ಆಂಬ್ಯುಲೆನ್ಸ್  ವ್ಯವಸ್ಥೆ ಮಾಡಲಾಗಿದೆ 9 ಡಿಸಿಪಿ, 16 ಎಸಿಪಿ ಸೇರಿದಂತೆ ಒಟ್ಟು 1050 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಇನ್ನು ನಗರದಾದ್ಯಂತ ಒಟ್ಟು 9422 ಪೊಲೀಸ್ ಸಿಬ್ಬಂದಿಗಳ ನಿಯೋಜಿಸಲಾಗಿದ್ದು, ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಿನ ಭದ್ರತೆ ನೀಡಲಾಗಿದೆ. ಈ ಬಾರಿ ನೀರಿನ ಬಾಟಲಿ, ಶಸ್ತ್ರಾಸ್ತಗಳನ್ನು ಒಳ ತರಲು ನಿಷೇಧಿಸಲಾಗಿದೆ ಅಂತ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಮಾಹಿತಿ ನೀಡಿದರು. ಪೊಲೀಸ್ ಆಯುಕ್ತ ಪ್ರವೀಣ್ ಸೂದ್, ಡಿಸಿ ಶಂಖರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗಡೀಪಾರದ ತಾರೀಖ್ ಬಾಂಗ್ಲಾಗೆ ಮರಳಿದ ದಿನವೇ ಮತ್ತೊಬ್ಬ ಹಿಂದೂ ಹತ್ಯೈಗೆದ ಉದ್ರಿಕ್ತರ ಗುಂಪು
ಹೊಸ ವರ್ಷಾಚರಣೆ ಸಮೀಪ ಹಿನ್ನೆಲೆ, ಬೆಂಗಳೂರಲ್ಲಿ ಕಟ್ಟುನಿಟ್ಟಿನ ನಿಗಾ, ಹಿರಿಯ ಪೊಲೀಸ್ ಅಧಿಕಾರಿಗಳ ಬೈಕ್ ರೈಡ್!