
ಬೆಂಗಳೂರು (ನ.08): ಟಿಪ್ಪು ಜಯಂತಿ ಆಚರಣೆಗೆ ರಾಜ್ಯ ಸರ್ಕಾರ ಸಕಲ ಸಿದ್ಧತೆ ನಡೆಸಿದೆ. ಟಿಪ್ಪು ಜಯಂತಿ ಜಟಾಪಟಿ ತಡೆಯೋಕೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ.
ಟಿಪ್ಪು ಜಯಂತಿ ಮಾಡಿ. ಮೆರವಣಿಗೆ ಮಾಡಬೇಡಿ ಎಂದು ಬೆಂಗಳೂರು ನಗರದಲ್ಲಿ ಎಲ್ಲಾ ವಲಯದ ಡಿಸಿಪಿಗಳಿಗೆ ಸೂಚನೆ ನೀಡಲಾಗಿದೆ. 30 KSRP ತುಕಡಿ, 25 ಸಿಆರ್ ಬೆಟಲಿಯನ್, ಗರುಡ ಫೋರ್ಸ್ ನಿಯೋಜನೆ ಮಾಡಲಾಗಿದೆ. ಟಿಪ್ಪು ಜಯಂತಿ ದಿನ ಸೂಕ್ಷ ಪ್ರದೇಶಗಳಿಗೆ 144ಸೆಕ್ಷನ್ ಜಾರಿ ಮಾಡಲಾಗುತ್ತದೆ. ಟಿಪ್ಪು ಜಯಂತಿ ಆಚರಣೆ ಮಾಡುವವರು ಮೆರವಣಿಗೆ ಮಾಡುವಂತಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಟಿ ಸುನೀಲ್ ಕುಮಾರ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.