
ನವದೆಹಲಿ[ಜೂ. 06] ನರೇಂದ್ರ ಮೋದಿ ನೇತೃತ್ವದ ಸರಕಾರ ಮತ್ತೆ ಅಸ್ತಿತ್ವಕ್ಕೆ ಬಂದಿದೆ. ಈ ಬಾರಿಯಾದರೂ ರಾಮಂದಿರ ನಿರ್ಮಾಣ ಕೆಲಸ ಆರಂಭವಾಗಲಿದೆಯಾ? ಎಂದು ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ.
ರಾಮಜನ್ಮಭೂಮಿಯಲ್ಲಿ ರಾಮಮಂದಿರ ನಿರ್ಮಾಣದ ಘೋಷಣೆ ಮಾಡುವ ಸಮಯ ಬಂದಿದೆ. ಸಂಪೂರ್ಣ 67.703 ಹೆಕ್ಟೇರ್ ಜಾಗ ಕೇಂದ್ರ ಸರಕಾರಕ್ಕೆ ಸೇರಿದ್ದು , ಸುಪ್ರೀಂ ಕೋರ್ಟ್ ತೀರ್ಮಾನ ಹೊರಡಿಸಿದಾಗ ಪರಿಹಾರ ನೀಡಲು ಸಾಧ್ಯವಿದೆ.
ರಾಮ ಮಂದಿರ ಕಟ್ಟದಿದ್ರೆ ಜನ ಚಪ್ಪಲಿಯಿಂದ ಬಡಿತಾರೆ: ಶಿವಸೇನೆ!
ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿಗೆ ಮೇ. 31ರಂದು ಪತ್ರ ಬರೆದಿದ್ದ ಸ್ವಾಮಿ , ಯಾರದ್ದೇ ಭೂಮಿಯನ್ನಾದರೂ ವಶಕ್ಕೆ ಪಡೆದುಕೊಳ್ಳುವ ಅಧಿಕಾರ ಕೇಂದ್ರ ಸರಕಾರಕ್ಕೆ ಇದೆ ಎಂದು ಹೇಳಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.