ನೇಶನ್ ವಾಂಟ್ಸ್ ಟು ನೋ.... ಪದ ಬಳಸದಂತೆ ಅರ್ನಬ್ಗೆ ನೋಟಿಸ್!

Published : Apr 18, 2017, 04:38 AM ISTUpdated : Apr 11, 2018, 12:43 PM IST
ನೇಶನ್ ವಾಂಟ್ಸ್ ಟು ನೋ.... ಪದ ಬಳಸದಂತೆ ಅರ್ನಬ್ಗೆ ನೋಟಿಸ್!

ಸಾರಾಂಶ

‘ರಿಪಬ್ಲಿಕ್‌ ಟೀವಿ' ಇಂಗ್ಲಿಷ್‌ ಸುದ್ದಿವಾಹಿನಿ ಸ್ಥಾಪಿಸಹೊರಟಿರುವ ಪತ್ರಕರ್ತ ಅರ್ನಬ್‌ ಗೋಸ್ವಾಮಿ ಅವರು ‘ಟೈಮ್ಸ್‌ ನೌ' ಸುದ್ದಿವಾಹಿನಿಯ ಮುಖ್ಯ ಸಂಪಾದಕರಾಗಿದ್ದಾಗ ‘ನೇಶನ್‌ ವಾಂಟ್ಸ್‌ ಟು ನೋ' (ದೇಶ ಕೇಳಬಯಸುತ್ತದೆ..) ಎಂದು ಚರ್ಚೆಯ ಸಂದರ್ಭಗಳಲ್ಲಿ ಹೇಳುವುದು ಜನಪ್ರಿಯವಾಗಿತ್ತು. ‘ಆದರೆ ಈಗ ಕೃತಿಸ್ವಾಮ್ಯ ಕಾನೂನಿನಡಿ ಈ ವಾಕ್ಯ ಬಳಸದಂತೆ ಮಾಧ್ಯಮ ಸಂಸ್ಥೆಯೊಂದು ತಮಗೆ ಲೀಗಲ್‌ ನೋಟಿಸ್‌ ಜಾರಿ ಮಾಡಿದೆ' ಎಂದು ಖುದ್ದು ಅರ್ನಬ್‌ ಹೇಳಿದ್ದಾರೆ.

ಮುಂಬೈ(ಎ.18): ‘ರಿಪಬ್ಲಿಕ್‌ ಟೀವಿ' ಇಂಗ್ಲಿಷ್‌ ಸುದ್ದಿವಾಹಿನಿ ಸ್ಥಾಪಿಸಹೊರಟಿರುವ ಪತ್ರಕರ್ತ ಅರ್ನಬ್‌ ಗೋಸ್ವಾಮಿ ಅವರು ‘ಟೈಮ್ಸ್‌ ನೌ' ಸುದ್ದಿವಾಹಿನಿಯ ಮುಖ್ಯ ಸಂಪಾದಕರಾಗಿದ್ದಾಗ ‘ನೇಶನ್‌ ವಾಂಟ್ಸ್‌ ಟು ನೋ' (ದೇಶ ಕೇಳಬಯಸುತ್ತದೆ..) ಎಂದು ಚರ್ಚೆಯ ಸಂದರ್ಭಗಳಲ್ಲಿ ಹೇಳುವುದು ಜನಪ್ರಿಯವಾಗಿತ್ತು. ‘ಆದರೆ ಈಗ ಕೃತಿಸ್ವಾಮ್ಯ ಕಾನೂನಿನಡಿ ಈ ವಾಕ್ಯ ಬಳಸದಂತೆ ಮಾಧ್ಯಮ ಸಂಸ್ಥೆಯೊಂದು ತಮಗೆ ಲೀಗಲ್‌ ನೋಟಿಸ್‌ ಜಾರಿ ಮಾಡಿದೆ' ಎಂದು ಖುದ್ದು ಅರ್ನಬ್‌ ಹೇಳಿದ್ದಾರೆ.

 ಈ ಬಗ್ಗೆ ವಿಡಿಯೋ ಬಿಡುಗಡೆ ಮಾಡಿರುವ ಅವರು, ‘ನನಗೆ ಲೀಗಲ್‌ ನೋಟಿಸ್‌ ಬಂದಿದ್ದರೂ ಈ ವಾಕ್ಯವನ್ನು ಬಳಸುವುದರಿಂದ ತಡೆಯಲು ಯಾರಿಂದಲೂ ಆಗದು. ಸ್ಟುಡಿಯೋದಲ್ಲೇ ಇರುತ್ತೇನೆ. ಬೇಕಿದ್ದರೆ ನನ್ನನ್ನು ಬಂಧಿಸಿ' ಎಂದು ಸವಾಲೆಸೆದಿದ್ದಾರೆ.

ಎರಡು ವಾಹಿನಿಗಳ ಈ ಶೀತಲ ಸಮರದ ಮಧ್ಯೆ ಪ್ರೇಕ್ಷಕರಲ್ಲಿ ನಡುವೆಯೂ ಚರ್ಚೆಗಳು ಪ್ರಾರಂಭವಾಗಿವೆ. ಒಂದು ತಂಡ ಈ ವಾಕ್ಯವನ್ನು ಬಳಸಿ ಇದನ್ನು ಜನಪ್ರಿಯಗೊಳಿಸಿದ ಅರ್ನಬ್ ಪರವಾಗಿ ಮಾತನಾಡುತ್ತಿದ್ದರೆ, ಮತ್ತೆ ಕೆಲವರು ಇದನ್ನು ಬಳಸುವ ಹಕ್ಕು ಕೇವಲ ವಾಹಿನಿಗಷ್ಟೇ ಇದೆ ಎನ್ನುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಖರ್ಗೆ ಪ್ರಧಾನಿ ಆಗಲಿಲ್ಲ, ನಾನು ಮಂತ್ರಿ ಆಗಲಿಲ್ಲ, ನೋವು ತೋಡಿಕೊಂಡ ಬಸವರಾಜ ರಾಯರೆಡ್ಡಿ
ಕಾಂಗ್ರೆಸ್‌ನಲ್ಲಿ ಡಿನ್ನರ್‌, ಇನ್ನರ್‌ ಪಾಲಿಟಿಕ್ಸ್‌ ನಿಲ್ಲುತ್ತಿಲ್ಲ: ಛಲವಾದಿ ನಾರಾಯಣಸ್ವಾಮಿ