ದೆಹಲಿ ವಿಧಾನಸಭೆಯಲ್ಲಿ ಟಿಪ್ಪು ಭಾವಚಿತ್ರ ಅನಾವರಣ

Published : Jan 27, 2018, 04:40 PM ISTUpdated : Apr 11, 2018, 12:50 PM IST
ದೆಹಲಿ ವಿಧಾನಸಭೆಯಲ್ಲಿ ಟಿಪ್ಪು ಭಾವಚಿತ್ರ ಅನಾವರಣ

ಸಾರಾಂಶ

ದೇಶಕ್ಕಾಗಿ ಹೋರಾಡಿದ ಸುಮಾರು 70 ಸ್ವಾತಂತ್ರ್ಯ ಸೇನಾನಿಗಳ ಭಾವಚಿತ್ರಗಳ ಅನಾವರಣ ಟಿಪ್ಪು ಸುಲ್ತಾನ್ ಭಾವಚಿತ್ರ ಹಾಕಿರವುದಕ್ಕೆ ಬಿಜೆಪಿ ಆಕ್ಷೇಪ

ನವದೆಹಲಿ: ಕಳೆದ ನವಂಬರ್’ನಲ್ಲಿ ರಾಜ್ಯ ರಾಜಕಾರಣದಲ್ಲಿ ಚರ್ಚೆ ಹುಟ್ಟುಹಾಕಿದ್ದ ‘ಟಿಪ್ಪು’ ವಿಚಾರ ಇದೀಗ ದೆಹಲಿ ವಿಧಾನಸಭೆಯಲ್ಲೂ ವಿವಾದಕ್ಕೆ ಕಾರಣವಾಗಿದೆ.

69ನೇ ಗಣರಾಜ್ಯೋತ್ಸವ ಸಂದರ್ಭದಲ್ಲಿ ದೆಹಲಿ ವಿಧಾನಸಭೆಯಲ್ಲಿ ಟಿಪ್ಪು ಸುಲ್ತಾನ್ ಫೋಟೋವನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅನಾವರಣ ಮಾಡಿದ್ದಕ್ಕೆ ಬಿಜೆಪಿಯು ಅಪಸ್ವರ ಎತ್ತಿದೆ.

ಭಗತ್ ಸಿಂಗ್, ಅಶ್ಫಾಕುಲ್ಲಾ ಖಾನ್, ಬಿರ್ಸಾ ಮುಂಡಾ, ಸೇರಿದಂತೆ ದೇಶಕ್ಕಾಗಿ ಹೋರಾಡಿದ ಸುಮಾರು 70 ಸ್ವಾತಂತ್ರ್ಯ ಸೇನಾನಿಗಳ ಭಾವಚಿತ್ರಗಳನ್ನು ಕೇಜ್ರಿವಾಲ್ ಅನಾವರಣಗೊಳಿಸಿದ್ದಾರೆ.

ಭಗತ್ ಸಿಂಗ್ ದೇಶದ ಹೆಮ್ಮೆ. ಆದರೆ ಟಿಪ್ಪು ಸುಲ್ತಾನ್’ನಂತಹ  ವಿವಾದಾತ್ಮಕ ವ್ಯಕ್ತಿತ್ವವನ್ನು ಗೌರವಿಸುವುದರಿಂದ ಜನರ ಭಾವನೆಗಳಿಗೆ ಧಕ್ಕೆಯಾಗುತ್ತದೆ ಎಂದು  ಬಿಜೆಪಿ ಶಾಸಕ ಓಂ ಪ್ರಕಾಶ್ ಶರ್ಮಾ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೋಟಿ ಬೆಲೆಬಾಳುವ ಲ್ಯಾಂಬೋರ್ಗಿನಿ ಕಾರಿದ್ದರೇನು? ಆರ್‌ಟಿಒ ಅಧಿಕಾರಿಗಳ ಮುಂದೆ ಮಂಡಿಯೂರಿದ ಮಾಲೀಕ!
ಈ ಟ್ರೆಂಡ್ ಶುರು ಮಾಡಿದ್ದು ಮೆಹಬೂಬಾ: ನಿತೀಶ್‌ಕುಮಾರ್ ಬುರ್ಖಾ ಎಳೆದಿದ್ದಕ್ಕೆ ಮುಫ್ತಿಗೆ ಒಮರ್ ಟಾಂಗ್