
ತಿರುಪತಿ : ಆಗಸ್ಟ್ ತಿಂಗಳಿನಲ್ಲಿ ತಿರುಪತಿಗೆ ಹೋಗುವವರಿದ್ದರೆ ಇಲ್ಲೊಮ್ಮೆ ಗಮನಿಸಿ. ತಿರುಪತಿಯಲ್ಲಿ ಆಗಸ್ಟ್ ತಿಂಗಳಿನಲ್ಲಿ 'ಅಷ್ಟಬಂಧ ಬಾಲಾಲಯ ಮಹಾಸಂಪ್ರೋಕ್ಷಣಂ' ಆಚರಣೆ ಇರುವ ಕಾರಣ 5 ದಿನಗಳವರೆಗೆ ಭಕ್ತಾಧಿಗಳಿಗೆ ಪ್ರವೇಶವನ್ನು ಟಿಟಿಡಿ ನಿರ್ಬಂಧಿಸಿದೆ.
ಅಷ್ಟಬಂಧ ಬಾಲಾಲಯ ಮಹಾಸಂಪ್ರೋಕ್ಷಣಂ' ಪೂಜೆಯನ್ನು 12 ವರ್ಷಕ್ಕೊಮ್ಮೆ ಆಚರಿಸಲಾಗುವುದು. ಈ ಕುರಿತು ದೇವಾಲಯದ ಆಡಳಿತ ಮಂಡಳಿ ಇದೇ ತಿಂಗಳಿನಲ್ಲಿ ನಿರ್ಧಾರ ಕೈಗೊಳ್ಳಲಿದ್ದು, ಈಗಾಗಲೇ ಆಗಸ್ಟ್ 12ರಿಂದ 16ವರೆಗೆ ಅರ್ಚನೆ ಸೇವೆಯನ್ನು ಹಾಗೂ ಆಗಸ್ಟ್ 13-16ರವರೆಗೆ ಭಕ್ತಾಧಿಗಳಿಗೆ ದರ್ಶನವನ್ನು ರದ್ದುಗೊಳಿಸಲಾಗಿದೆ.
ಈ ದಿನಗಳಲ್ಲಿ ದರ್ಶನ ಅವಧಿ ಕಡಿತಗೊಳಿಸಲಾಗುತ್ತಿದೆ. ಆದ್ದರಿಂದ ಈ ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತರು ಈ ದಿನಗಳನ್ನು ಹೊರತು ಪಡಿಸಿ ಪ್ಲಾನ್ ಮಾಡಲು ದೇವಾಲಯದ ಆಡಳಿತ ಮಂಡಳಿ ವಿನಂತಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.