ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ವಿಐಪಿ ವ್ಯವಸ್ಥೆ ರದ್ದು!

Published : Jul 19, 2019, 07:55 AM IST
ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ವಿಐಪಿ ವ್ಯವಸ್ಥೆ ರದ್ದು!

ಸಾರಾಂಶ

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ವಿಐಪಿ ವ್ಯವಸ್ಥೆ ರದ್ದು| ವಿಐಪಿಗಳು ಇನ್ನು ಮುಂದೆ ಸಾಮಾನ್ಯ ಭಕ್ತರಂತೆ ಸರತಿ ಸಾಲಿನಲ್ಲಿ ನಿಲ್ಲುವ ಮೂಲಕ ದೇವರ ಮುಂದೆ ಎಲ್ಲರೂ ಒಂದೇ ಎಂಬ ಸಂದೇಶ ಸಾರುವಂತಾಗಿದೆ

ತಿರುಪತಿ[ಜು.19]: ಭಕ್ತಾದಿಗಳಿಂದ ಸದಾ ಗಿಜಿಗುಡುವ ತಿರುಪತಿ- ತಿರುಮಲ ವೆಂಕಟೇಶ್ವರ ದೇಗುಲದಲ್ಲಿ ಗಣ್ಯಾತಿಗಣ್ಯ ವ್ಯಕ್ತಿಗಳಿಗೆ ತ್ವರಿತವಾಗಿ ದರ್ಶನ ಅವಕಾಶ ಕಲ್ಪಿಸುತ್ತಿದ್ದ ಕ್ಯೂ ರಹಿತ ವಿಐಪಿ ದರ್ಶನ ವ್ಯವಸ್ಥೆ ಗುರುವಾರದಿಂದ ರದ್ದಾಗಿದೆ. ಹೀಗಾಗಿ ವಿಐಪಿಗಳು ಇನ್ನು ಮುಂದೆ ಸಾಮಾನ್ಯ ಭಕ್ತರಂತೆ ಸರತಿ ಸಾಲಿನಲ್ಲಿ ನಿಲ್ಲುವ ಮೂಲಕ ದೇವರ ಮುಂದೆ ಎಲ್ಲರೂ ಒಂದೇ ಎಂಬ ಸಂದೇಶ ಸಾರುವಂತಾಗಿದೆ.

ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ನೂತನ ಮುಖ್ಯಸ್ಥ ವೈ.ವಿ. ಸುಬ್ಬಾರೆಡ್ಡಿ ಅವರು ವಿಐಪಿ ದರ್ಶನ ರದ್ದುಗೊಳಿಸುವ ಸಂಬಂಧ ಕಳೆದ ವಾರ ನಿರ್ಧಾರ ಕೈಗೊಂಡಿದ್ದರು. ಗುರುವಾರದಿಂದ ಅದು ಜಾರಿಗೆ ಬಂದಿದೆ. ಹಿರಿಯ ಗಣ್ಯರ ಭಾವನೆಗಳಿಗೆ ಧಕ್ಕೆ ಮಾಡುವ ಉದ್ದೇಶ ಇಲ್ಲ. ಆದರೆ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಲ್ಲುವ ಭಕ್ತರಿಗೆ ಸಹಾಯ ಮಾಡುವ ಉದ್ದೇಶದಿಂದ ಈ ವ್ಯವಸ್ಥೆ ಜಾರಿಗೆ ತರಲಾಗಿದೆ. ದೇವರ ಮುಂದೆ ಎಲ್ಲ ಭಕ್ತರೂ ಸಮಾನರು. ಮುಂದಿನ ದಿನಗಳಲ್ಲಿ ಅತಿಗಣ್ಯರಿಗೆ ಬೇರೆ ವ್ಯವಸ್ಥೆ ಮಾಡಲಾಗುವುದು ಎಂದು ಸುಬ್ಬಾರೆಡ್ಡಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದುವರೆಗೆ ಎಲ್‌ 1, ಎಲ್‌ 2 ಮತ್ತು ಎಲ್‌ 3 ಎಂಬ ಮೂರು ವಿಭಾಗಗಳಲ್ಲಿ ಬೇರೆ ಬೇರೆ ಗಣ್ಯರಿಗೆ ದೇವರ ದರ್ಶನಕ್ಕೆ ನೇರ ಅವಕಾಶ ಸಿಗುತ್ತಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೈಸೂರು ಏಕತಾ ಮಹಲ್‌ ವಿವಾದ, ತಾಯಿ-ಮಗನ ವೈರುಧ್ಯ ನಡೆ, ಕೋರ್ಟ್ ಮೆಟ್ಟಲೇರಿದ ರಾಜಮಾತೆ ಪ್ರಮೋದಾದೇವಿ!
ವಿಮಾನದ ಬಾಲಕ್ಕೆ ಪ್ಯಾರಾಚೂಟ್ ಸಿಲುಕಿ15,000 ಅಡಿ ಎತ್ತರದಲ್ಲಿ ನೇತಾಡಿದ ಸ್ಕೈಡೈವರ್ ಬದುಕುಳಿದಿದ್ದು ಹೇಗೆ? ವೀಡಿಯೋ