
ಬೆಂಗಳೂರು (ಸೆ.20): ತಿರುಪತಿಯ ತಿರುಮಲ ದೇವಾಲಯದಲ್ಲಿ ಪ್ರಸಾದ ರೂಪದಲ್ಲಿ ತಯಾರಿಸುವ ಲಡ್ಡುಗೆ, ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿ ಪರವಾನಗಿ ನೀಡಲಾಗಿದೆ.
ಲಡ್ಡು ತಯಾರಿಕೆಯಲ್ಲಿ ಶುಚಿತ್ವದ ಕೊರತೆ, ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯದ ಬಗ್ಗೆ ಮಾತು ದೂರು ಕೇಳಿ ಬಂದ ಹಿನ್ನೆಲೆ, ಟಿಟಿಡಿ ಟ್ರಸ್ಟ್ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯನ್ನ ಸಂಪರ್ಕಿಸಿ, ಲಡ್ಡು ತಯಾರಿಕೆ ಬಗ್ಗೆ ಮಾಹಿತಿ ನೀಡಿದೆ. ಈ ಹಿನ್ನೆಲೆ ಆಹಾರ ಗುಣಮಟ್ಟ ಪ್ರಾಧಿಕಾರದ ಚೆನ್ನೈನ ಕೇಂದ್ರೀಯ ಪರವಾನಗಿ ಘಟಕವು, ಟಿಟಿಡಿ ಟ್ರಸ್ಟ್ಗೆ ಈ ವರ್ಷದ ಆಗಸ್ಟ್ ತಿಂಗಳಿನಲ್ಲಿ ಪರವಾನಗಿ ನೀಡಿದೆ. ಇದಕ್ಕಾಗಿ ಟಿಟಿಡಿ 7,500 ರೂ. ಪರವಾನಗಿ ಶುಲ್ಕ ಪಾವತಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.