ಟಿಎಂಸಿ, ಸಿಪಿಐ, ಎನ್’ಸಿಪಿ ರಾಷ್ಟ್ರೀಯ ಪಕ್ಷದ ಮಾನ್ಯತೆ ರದ್ದು ಸಂಭವ!

Published : Jul 19, 2019, 06:33 PM ISTUpdated : Jul 19, 2019, 06:34 PM IST
ಟಿಎಂಸಿ, ಸಿಪಿಐ, ಎನ್’ಸಿಪಿ ರಾಷ್ಟ್ರೀಯ ಪಕ್ಷದ ಮಾನ್ಯತೆ ರದ್ದು ಸಂಭವ!

ಸಾರಾಂಶ

ರಾಷ್ಟ್ರೀಯ ಪಕ್ಷದ ಮಾನ್ಯತೆ ಕಳೆದುಕೊಳ್ಳುವ ಭೀತಿಯಲ್ಲಿ ಮೂರು ಪಕ್ಷಗಳು| ಟಿಎಂಸಿ, ಸಿಪಿಐ, ಎನ್’ಸಿಪಿ ರಾಷ್ಟ್ರೀಯ ಪಕ್ಷದ ಮಾನ್ಯತೆ ರದ್ದು ಸಂಭವ| ಮೂರೂ ಪಕ್ಷಗಳಿಗೂ ನೊಟೀಸ್ ಜಾರಿ ಮಾಡಿರುವ ಚುನಾವಣಾ ಆಯೋಗ| ಆ.15ರೊಳಗಾಗಿ ನೊಟೀಸ್’ಗೆ ಉತ್ತರಿಸುವಂತೆ ಚುನಾವಣಾ ಆಯೋಗ ಸೂಚನೆ| ಲೋಕಸಭೆ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ಹಿನ್ನೆಲೆ ನೊಟೀಸ್|

ನವದೆಹಲಿ(ಜು.19): ಲೋಕಸಭೆ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ತೋರಿದ ಹಿನ್ನೆಲೆಯಲ್ಲಿ, ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್(ಟಿಎಂಸಿ), ಶರದ್ ಪವಾರ್ ನೇತೃತ್ವದ ನ್ಯಾಶಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್’ಸಿಪಿ) ಹಾಗೂ ಭಾರತೀಯ ಕಮ್ಯೂನಿಸ್ಟ್ ಪಕ್ಷ(ಸಿಪಿಐ)ಗಳು ರಾಷ್ಟ್ರೀಯ ಪಕ್ಷದ ಮಾನ್ಯತೆ ಕಳೆದುಕೊಳ್ಳುವ ಭೀತಿಯಲ್ಲಿವೆ.

ಈ ಕುರಿತು ಮೂರೂ ಪಕ್ಷಗಳಿಗೂ ನೊಟೀಸ್ ಜಾರಿ ಮಾಡಿರುವ ಚುನಾವಣಾ ಆಯೋಗ, ಇದೇ ಆ.15ರೊಳಗಾಗಿ ರಾಷ್ಟ್ರೀಯ ಪಕ್ಷದ ಮಾನ್ಯತೆ ಏಕೆ ರದ್ದುಗೊಳಿಸಬಾರದು ಎಂಬ ಪ್ರಶ್ನೆಗೆ ಉತ್ತರಿಸುವಂತೆ ಆದೇಶಿಸಿದೆ.

ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಎನ್’ಸಿಪಿ 5 ಸೀಟುಗಳನ್ನು ಪಡೆದಿದ್ದರೆ, ಟಿಎಂಸಿ 18 ಸೀಟುಗಳನ್ನು ಗಳಿಸಿದೆ. ಅದರಂತೆ ಸಿಪಿಐ ಒಂದೇ ಒಂದು ಸ್ಥಾನ ಗಳಿಸಿಲ್ಲ. ಮೂರೂ ಪಕ್ಷಗಳ ಪೈಕಿ ಟಿಎಂಸಿ ಪ.ಬಂಗಾಳದಲ್ಲಿ ಅಧಿಕಾರದಲ್ಲಿದ್ದರೆ, ಎನ್’ಸಿಪಿ ಮಹಾರಾಷ್ಟ್ರ ವಿಧಾನಸಭೆಯಲ್ಲೂ ಅಷ್ಟೊಂದು ಸಂಖ್ಯಾಬಲ ಹೊಂದಿಲ್ಲ.

ಈ ಹಿನ್ನೆಲೆಯಲ್ಲಿ ಈ ಮೂರು ಪಕ್ಷಗಳು ರಾಷ್ಟ್ರೀಯ ಪಕ್ಷದ ಮಾನ್ಯತೆ ಕಳೆದುಕೊಳ್ಳುವ ಸಂಭವನೀಯತೆ ಹೆಚ್ಚು ಎನ್ನಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೂಡಿಗೆರೆ: ಮನೆ ಭೋಗ್ಯ ವಿಚಾರಕ್ಕೆ ಜಗಳ, ಮಹಿಳೆಯ ಜಡೆ ಹಿಡಿದು ಎಳೆದು ಬಿಸಾಡಿ ಹಲ್ಲೆ.!
Bengaluru: ಹಾರ್ಟ್‌ ಅಟ್ಯಾಕ್‌ ಆಗಿ ರಸ್ತೆಯಲ್ಲಿ ಬಿದ್ದ ವ್ಯಕ್ತಿ, ಪತ್ನಿಯ ಗೋಳಾಟ ಕೇಳಿಯೂ ನೆರವಿಗೆ ಬಾರದ ಜನ!