ತ್ರಿಪಾಠಿಯನ್ನು ರಾಜ್ಯಪಾಲ ಹುದ್ದೆಯಿಂದ ಕೆಳಗಿಳಿಸುವಂತೆ ಟಿಎಂಸಿ ಆಗ್ರಹ; ಬಂಡೂರಿಯಾದಲ್ಲಿ 48 ಗಂಟೆ ಕರ್ಫ್ಯೂ

Published : Jul 05, 2017, 04:10 PM ISTUpdated : Apr 11, 2018, 12:42 PM IST
ತ್ರಿಪಾಠಿಯನ್ನು ರಾಜ್ಯಪಾಲ ಹುದ್ದೆಯಿಂದ ಕೆಳಗಿಳಿಸುವಂತೆ ಟಿಎಂಸಿ ಆಗ್ರಹ; ಬಂಡೂರಿಯಾದಲ್ಲಿ 48 ಗಂಟೆ ಕರ್ಫ್ಯೂ

ಸಾರಾಂಶ

ರಾಜ್ಯಪಾಲ ಕೆ.ಎನ್ ತ್ರಿಪಾಠಿ ಮುಖ್ಯಮಮತ್ರಿ ಮಮತಾ ಬ್ಯಾನರ್ಜಿಯನ್ನು ನಿಂದಿಸಿ ಬೆದರಿಕೆ ಹಾಕಿರುವುದನ್ನು ಟಿಎಂಸಿ ತೀವ್ರವಾಗಿ ಖಂಡಿಸಿದ್ದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಗೃಹ ಸಚಿವ ರಾಜನಾಥ್ ಸಿಂಗ್’ಗೆ ಪತ್ರ ಬರೆದಿದ್ದಾರೆ. ಈ ವಿಚಾರವನ್ನು ಪರಿಗಣಿಸಬೇಕೆಂದು ಕೇಳಿಕೊಂಡಿದ್ದಾರೆ.

ಕೋಲ್ಕತ್ತಾ (ಜು.05): ರಾಜ್ಯಪಾಲ ಕೆ.ಎನ್ ತ್ರಿಪಾಠಿ ಮುಖ್ಯಮಮತ್ರಿ ಮಮತಾ ಬ್ಯಾನರ್ಜಿಯನ್ನು ನಿಂದಿಸಿ ಬೆದರಿಕೆ ಹಾಕಿರುವುದನ್ನು ಟಿಎಂಸಿ ತೀವ್ರವಾಗಿ ಖಂಡಿಸಿದ್ದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಗೃಹ ಸಚಿವ ರಾಜನಾಥ್ ಸಿಂಗ್’ಗೆ ಪತ್ರ ಬರೆದಿದ್ದಾರೆ. ಈ ವಿಚಾರವನ್ನು ಪರಿಗಣಿಸಬೇಕೆಂದು ಕೇಳಿಕೊಂಡಿದ್ದಾರೆ.

ರಾಜ್ಯಪಾಲ ಕೆ.ಎನ್ ತ್ರಿಪಾಠಿ ಸಾಂವಿಧಾನಿಕ ಮಿತಿಯನ್ನು ದಾಟಿ ನಮ್ಮ ಮುಖ್ಯಮಂತ್ರಿ ಜೊತೆ ಅನುಚಿತವಾಗಿ ವರ್ತಿಸಿದ್ದು ದುರಾದೃಷ್ಟ. ನಾವು ಇದನ್ನು ಸಹಿಸುವುದಿಲ್ಲ. ಇದರ ಬಗ್ಗೆ ಕೇಂದ್ರ ಗೃಹ ಸಚಿವರಿಂದ ಸಮಜಾಯಿಷಿ ಕೇಳಲು ಬಯಸುತ್ತೇವೆ. ಈ ವಿಚಾರದಲ್ಲಿ ಮಧ್ಯ ಪ್ರವೇಶಿಸುವಂತೆ ರಾಷ್ಟ್ರಪತಿಯವರಿಗೆ ಕೇಳಿಕೊಂಡಿದ್ದೇವೆ. ತ್ರಿಪಾಠಿಯವರನ್ನು  ರಾಜ್ಯಪಾಲ ಹುದ್ದೆಯಿಂದ ಕೆಳಗಿಳಿಸಬೇಕೆಂದು ಟಿಎಂಸಿ ಒತ್ತಾಯಿಸಿದೆ.

ಬಂಡೂರಿಯಾ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ 48 ಗಂಟೆಗಳ ಕಾಲ ಕರ್ಫ್ಯೂ ವಿಧಿಸಲಾಗಿದೆ. ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ಸಶಸ್ತ್ರ ಪಡೆಯನ್ನು ಆಯೋಜಿಸಲಾಗಿದೆ. ಇಂಟರ್’ನೆಟ್ ಸೌಲಭ್ಯವನ್ನು ಕಡಿತಗೊಳಿಸಲಾಗಿದೆ. ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜಣ್ಣ ನೇಮಿಸಿದ್ದು ನಾನೇ ಎಂದ ಡಿಕೆಗೆ ಸಿದ್ದು ಟಾಂಗ್‌
‘ನರೇಗಾ’ ಬದಲಾವಣೆ ವಿರುದ್ಧ ಹೋರಾಟ, ಇದು ಐತಿಹಾಸಿಕ ಪ್ರಮಾದ: ಸಚಿನ್‌ ಪೈಲಟ್