
ಚೆನ್ನೈ (ಡಿ.24): ತಮಿಳುನಾಡು ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಪಿ.ರಾಮಮೋಹನ್ ರಾವ್ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವರನ್ನು ಶ್ರೀ ರಾಮಚಂದ್ರ ಮೆಡಿಕಲ್ ಆಸ್ಪತ್ರೆಯ ತೀವ್ರಾ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಕಳೆದ ಬುಧವಾರ ಹಿಂದೆ ಆದಾಯ ತೆರಿಗೆ ಅಧಿಕಾರಿಗಳು ಅವರ ಕಛೇರಿ ಹಾಗೂ ನಿವಾಸದ ಮೇಲೆ ದಾಳಿ ನಡೆಸಿದ್ದರು.
ಚೆನ್ನೈನ ಅಣ್ಣಾ ನಗರದಲ್ಲಿರುವ ರಾವ್ ಮನೆ ಮೇಲೆ ಬೆಳಗಿನ ಜಾವ 5:30ರ ವೇಳೆ ಐಟಿ ದಾಳಿ ನಡೆಸಿದ್ದ ಐಟಿ ತಂಡ, ದಾಖಲೆಗಳನ್ನು ಪರಿಶೀಲಿಸಿತ್ತು.
ರಾಮಮೋಹನ್ ಅವರ ಸಂಬಂಧಿಕರ 7 ಮನೆಗಳ ಮೇಲೂ ಐಟಿ ದಾಳಿ ನಡೆಸಲಾಗಿತ್ತು. ಐಟಿ ದಾಳಿಯ ಬಳಿಕ ಅವರನ್ನು ಮುಖ್ಯ ಕಾರ್ಯದರ್ಶಿ ಸ್ಥಾನದಿಂದ ತೆಗೆದುಹಾಕಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.