
ನವದೆಹಲಿ (ಡಿ.18) ಇತ್ತೀಚೆಗೆ ನಿಧನರಾದ ಜಯಾಲಲಿತಾರಿಗೆ ಭಾರತ ರತ್ನ ನೀಡಿ ಪ್ರಶಸ್ತಿ ಘೋಷಿಸಬೇಕೆಂದು ಕೋರಿ ತಮಿಳುನಾಡು ಮುಖ್ಯಮಂತ್ರಿ ಓ. ಪನ್ನೀರ್’ಸೆಲ್ವಂ ನಾಳೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಸಲ್ಲಿಸಲಿದ್ದಾರೆ.
ಜತೆಗೆ, ಸಂಸತ್ತು ಕಟ್ಟಡದಲ್ಲಿ ಜಯಾ ಅವರ ಕಂಚಿನ ಪ್ರತಿಮೆಯನ್ನು ಕೂಡ ಪ್ರತಿಷ್ಠಾಪನೆ ಮಾಡಬೇಕೆಂದು ಮನವಿ ಮಾಡುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಕಳೆದ ಡಿ.10ರಂದು ತಮಿಳುನಾಡು ಸಚಿವ ಸಂಪುಟ, ಜಯಾ ಅವರ ಹೆಸರನ್ನು ಭಾರತ ರತ್ನ ಪ್ರಶಸ್ತಿಗೆ ಶಿಫಾರಸ್ಸು ಮಾಡುವ ಹಾಗೂ ಸಂಸತ್ತು ಕಟ್ಟಡದಲ್ಲಿ ಅಮ್ಮ ಪುತ್ಥಳಿ ಪ್ರತಿಷ್ಠಾಪಿಸುವ ಬಗ್ಗೆ ನಿರ್ಣಯವನ್ನು ಕೈಗೊಂಡಿತ್ತು.
ಸೆ.22ರಂದು ಅನಾರೋಗ್ಯ ನಿಮಿತ್ತ ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದ ಜಯಾ ಡಿ.5ರಂದು ಕೊನೆಯುಸಿರೆಳೆದಿದ್ದರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.