
ಮುಂಬೈ[ಅ.26]: ಮುಖ್ಯಮಂತ್ರಿ ಹುದ್ದೆಗಾಗಿ ಮಹಾರಾಷ್ಟ್ರದ ಬಿಜೆಪಿ- ಶಿವಸೇನೆ ನಡುವೆ ಹಗ್ಗಜಗ್ಗಾಟ ನಡೆಯುತ್ತಿರುವಾಗಲೇ, ಶಿವಸೇನೆಯನ್ನು ಸೆಳೆಯಲು ಕಾಂಗ್ರೆಸ್ ಬಹಿರಂಗ ಆಹ್ವಾನ ನೀಡಿದೆ. ಒಂದು ವೇಳೆ, ಶಿವಸೇನೆ ಏನಾದರೂ ಬಿಜೆಪಿ ಸಂಗ ತೊರೆಯುವ ಧೈರ್ಯ ತೋರಿದರೆ, ಉದ್ಧವ್ ಠಾಕ್ರೆ ನೇತೃತ್ವದ ಪಕ್ಷದ ಜತೆ ಕೈಜೋಡಿಸಲು ತಾವು ಸಿದ್ಧವಾಗಿದ್ದೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಬಾಳಾಸಾಹೇಬ್ ಥೋರಟ್ ಹೇಳಿದ್ದಾರೆ.
ಈ ಕುರಿತು ಶಿವಸೇನೆ ಪ್ರಸ್ತಾವ ಕಳಿಸಿದರೆ, ದೆಹಲಿಯಲ್ಲಿರುವ ಪಕ್ಷದ ನಾಯಕರ ಜತೆ ಚರ್ಚೆ ನಡೆಸುತ್ತೇನೆ. ಇದಕ್ಕೆ ಮುಕ್ತವಾಗಿದ್ದೇನೆ ಎಂದು ಖಾಸಗಿ ವಾಹಿನಿಯೊಂದಕ್ಕೆ ಅವರು ತಿಳಿಸಿದ್ದಾರೆ. ಮೂಲಗಳ ಪ್ರಕಾರ, ಬಿಜೆಪಿಯನ್ನು ತೊರೆದು ಬಂದರೆ, ಶಿವಸೇನೆಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡಲೂ ಕಾಂಗ್ರೆಸ್ ಸಿದ್ಧವಾಗಿದೆ.
‘ಮಹಾ ಜನಾದೇಶ’ ಇಲ್ಲ: ಬಿಜೆಪಿಗೆ ಶಿವಸೇನೆ ಚಾಟಿ!
ಇದೇ ವೇಳೆ, ಬಾರಾಮತಿಗೆ ತೆರಳಿ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಜತೆಗೆ ಥೋರಟ್ ಅವರು ಭವಿಷ್ಯದ ರಾಜಕೀಯ ನಡೆಗಳ ಕುರಿತು ಮಾತುಕತೆ ನಡೆಸಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಒಂದು ಪಕ್ಷಕ್ಕೆ ಬಹುಮತ ಬಂದಿಲ್ಲ. 288 ಸದಸ್ಯ ಬಲದ ವಿಧಾನಸಭೆಯಲ್ಲಿ ಬಹುಮತಕ್ಕೆ 145 ಸ್ಥಾನ ಬೇಕು. ಬಿಜೆಪಿ (105)- ಶಿವಸೇನೆ (56) ಮಿತ್ರಕೂಟ 166 ಸ್ಥಾನ ಗಳಿಸಿವೆ. ಆದರೆ ಮುಖ್ಯಮಂತ್ರಿ ಹುದ್ದೆಯನ್ನು ತನಗೂ ನೀಡಬೇಕು ಎಂದು ಶಿವಸೇನೆ ಪಟ್ಟು ಹಿಡಿದಿದೆ. ಶಿವಸೇನೆ ಏನಾದರೂ ಮುನಿಸಿಕೊಂಡು ಹೊರಬಂದು ಕಾಂಗ್ರೆಸ್ ಹಾಗೂ ಎನ್ಸಿಪಿ ಜತೆಗೂಡಿದರೆ ಹೊಸ ಮೈತ್ರಿಕೂಟದ ಬಲ 154 ಆಗುತ್ತದೆ. ಬಹುಮತಕ್ಕೆ ಸಮಸ್ಯೆಯಾಗುವುದಿಲ್ಲ.
ಕೆಲವೆಡೆ ಕಾಂಗ್ರೆಸ್ ಕಮಾಲ್, ಹಲವೆಡೆ ಬಿಜೆಪಿ ಧಮಾಲ್: ಬೈ ಎಲೆಕ್ಷನ್ ರಿಸಲ್ಟ್!
ಅಕ್ಟೋಬರ್ 26ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.