ಬರ ಪೀಡಿತ ಪ್ರದೇಶಗಳಲ್ಲಿ ಇಂದು ಮೋಡ ಬಿತ್ತನೆ: ಎಚ್.ಕೆ ಪಾಟೀಲ್'ರಿಂದ ಚಾಲನೆ

Published : Aug 21, 2017, 10:01 AM ISTUpdated : Apr 11, 2018, 12:35 PM IST
ಬರ ಪೀಡಿತ ಪ್ರದೇಶಗಳಲ್ಲಿ ಇಂದು ಮೋಡ ಬಿತ್ತನೆ: ಎಚ್.ಕೆ ಪಾಟೀಲ್'ರಿಂದ ಚಾಲನೆ

ಸಾರಾಂಶ

ಸತತವಾಗಿ 3 ವರ್ಷಗಳಿಂದ ರಾಜ್ಯ ಭೀಕರ ಬರಗಾಲ ಎದುರಿಸುತ್ತಿದ್ದು ಬರಪೀಡಿತ ಪ್ರದೇಶಗಳಲ್ಲಿ ಇಂದು ರಾಜ್ಯ ಸರ್ಕಾರ ಮೋಡಬಿತ್ತನೆ ಮಾಡಲಿದೆ. ಬೆಂಗಳೂರಿನ ಜಕ್ಕೂರು ವಿಮಾನ ನೆಲೆಯಿಂದ ವಿದ್ಯುಕ್ತವಾಗಿ  ಸಚಿವ ಸನ್ಮಾನ್ಯ ಶ್ರೀ ಎಚ್.ಕೆ. ಪಾಟೀಲ ಅವರು  ಮಧ್ಯಾಹ್ನ 2 ಗಂಟೆಗೆ ಉದ್ಘಾಟನೆ ಮಾಡಲಿದ್ದಾರೆ.  

ಬೆಂಗಳೂರು(ಆ.21): ಸತತವಾಗಿ 3 ವರ್ಷಗಳಿಂದ ರಾಜ್ಯ ಭೀಕರ ಬರಗಾಲ ಎದುರಿಸುತ್ತಿದ್ದು ಬರಪೀಡಿತ ಪ್ರದೇಶಗಳಲ್ಲಿ ಇಂದು ರಾಜ್ಯ ಸರ್ಕಾರ ಮೋಡಬಿತ್ತನೆ ಮಾಡಲಿದೆ. ಬೆಂಗಳೂರಿನ ಜಕ್ಕೂರು ವಿಮಾನ ನೆಲೆಯಿಂದ ವಿದ್ಯುಕ್ತವಾಗಿ  ಸಚಿವ ಸನ್ಮಾನ್ಯ ಶ್ರೀ ಎಚ್.ಕೆ. ಪಾಟೀಲ ಅವರು  ಮಧ್ಯಾಹ್ನ 2 ಗಂಟೆಗೆ ಉದ್ಘಾಟನೆ ಮಾಡಲಿದ್ದಾರೆ.  

ಮೋಡಬಿತ್ತನೆಗಾಗಿ ಯಾದಗಿರಿ ಜಿಲ್ಲೆ ಸುರಪೂರ, ಗದಗ ಹಾಗೂ ಬೆಂಗಳೂರಿನಲ್ಲಿ 3-ರೆಡಾರ್ಗಳನ್ನು ಸ್ಥಾಪಿಸಲಾಗುತ್ತಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣ ಮತ್ತು ಬೆಂಗಳೂರು ಎಚ್.ಎ.ಎಲ್ ವಿಮಾನ ನಿಲ್ದಾಣ ಬಳಸಿಕೊಂಡು 2-ವಿಶೇಷ ವಿಮಾನಗಳಿಂದ ಮೋಡ ಬಿತ್ತನೆ ಕಾರ್ಯಚರಣೆ ಕೈಗೊಳ್ಳಲಾಗುತ್ತದೆ.  

ಪ್ರಸ್ತುತ ಮೋಡ ಬಿತ್ತನೆ ಕಾರ್ಯಾಚರಣೆಯನ್ನು ಅನುಷ್ಟಾನಗೊಳಿಸಲು ರಾಜ್ಯ ಮಟ್ಟದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ವಿಷಯ ತಜ್ಞರು ಮತ್ತು ಪರಿಣಿತ ವಿಜ್ಞಾನಿಗಳನ್ನು ಒಳಗೊಂಡ ವಿವಿಧ ತಂಡಗಳಾಗಿ ರಚಿಸುವ ಮೂಲಕ ವೈಜ್ಞಾನಿಕವಾಗಿ ನಿರ್ವಹಿಸಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್
ಚಾಲನೆಯಲ್ಲಿದ್ದಾಗಲೇ ಪ್ರಜ್ಞೆ ಕಳೆದುಕೊಂಡ ಚಾಲಕ: ವಿಮಾನ ಟೇಕಾಫ್‌ದಂತೆ ಮೇಲೇರಿದ ಮರ್ಸಿಡಿಸ್: ವೀಡಿಯೋ